ETV Bharat / state

ಚಾಮರಾಜನಗರ: ಬಾಳೆ ತೋಟದಲ್ಲಿ ಹುಲಿ ಪ್ರತ್ಯಕ್ಷ, ಯುವಕನ ಮೇಲೆ ದಾಳಿ - Tiger Attack

author img

By ETV Bharat Karnataka Team

Published : Apr 12, 2024, 10:50 PM IST

Forest Department staff
ಹುಲಿ ಸೆರೆ ಕಾರ್ಯಾಚರಣೆ ಕೈಗೊಂಡಿರುವ ಅರಣ್ಯ ಇಲಾಖೆ ಸಿಬ್ಬಂದಿ

ಗುಂಡ್ಲುಪೇಟೆ ತಾಲೂಕಿನ ಹೊನ್ನೇಗೌಡನಹಳ್ಳಿ ಗ್ರಾಮದ ರೈತನ ಬಾಳೆ ತೋಟದಲ್ಲಿ ಹುಲಿ ಕಾಣಿಸಿಕೊಂಡಿದೆ.

ಚಾಮರಾಜನಗರ: ಗುಂಡ್ಲುಪೇಟೆ ತಾಲೂಕಿನ ಹೊನ್ನೇಗೌಡನಹಳ್ಳಿ ಗ್ರಾಮದ ವೃಷಭೇಂದ್ರಪ್ಪ ಎಂಬ ರೈತನ ಬಾಳೆ ತೋಟದಲ್ಲಿ ಶುಕ್ರವಾರ ಮಧ್ಯಾಹ್ನ ಹುಲಿ ಪ್ರತ್ಯಕ್ಷವಾಗಿದೆ. ಗ್ರಾಮಸ್ಥರು ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ತಕ್ಷಣ ಅರಣ್ಯ ಮತ್ತು ಪೊಲೀಸ್ ಇಲಾಖೆಯವರು ಸ್ಥಳಕ್ಕಾಗಮಿಸಿ ಸೆರೆಗೆ ಕಾರ್ಯಾಚರಣೆ ಆರಂಭಿಸಿದರು. ಕಾರ್ಯಾಚರಣೆ ವೇಳೆ ಸುತ್ತಲಿದ್ದ ರೈತರು ಮತ್ತು ಗ್ರಾಮಸ್ಥರನ್ನು ಪೊಲೀಸರು ದೂರ ಕಳುಹಿಸಿದ್ದರು. ಇಲಾಖೆ ಸಿಬ್ಬಂದಿ ಸಿದ್ಧತೆಗಳೊಂದಿಗೆ ಹುಲಿಗೆ ಅರಿವಳಿಕೆ ನೀಡಲು ಮುಂದಾಗಿದ್ದರು. ಆದರೆ ಅರಣ್ಯ ಸಿಬ್ಬಂದಿ ತಂಡ ಬಾಳೆ ತೋಟ ಪ್ರವೇಶಿಸುತ್ತಿದ್ದಂತೆ ಹುಲಿ ಅಲ್ಲಿಂದ ಪಕ್ಕದ ತೋಟಕ್ಕೆ ಓಡಿಹೋಗಿದೆ.

ತೋಟದಿಂದ ತಪ್ಪಿಸಿಕೊಂಡ ಓಡುತ್ತಿದ್ದ ಹುಲಿ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಯುವಕನ ಮೇಲೆ ದಾಳಿ ನಡೆಸಿ ಗಾಯಗೊಳಿಸಿದೆ.‌ ಮನು(22) ಎಂಬಾತ ಗಾಯಗೊಂಡಿದ್ದಾನೆ. ಯುವಕನ ತಲೆ ಹಾಗು ಎಡಗೈಗೆ ಹುಲಿ ಪರಚಿದೆ. ಹುಲಿ ಕಾಲಿಗೆ ಗಾಯ ಆಗಿರಬಹುದು ಅಥವಾ ಅನಾರೋಗ್ಯ ಇರಬಹುದು ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಶಂಕಿಸಿದ್ದಾರೆ. ಬಂಡೀಪುರ ಅರಣ್ಯಾಧಿಕಾರಿಗಳು ಸ್ಥಳದಲ್ಲಿ ಬೀಡುಬಿಟ್ಟಿದ್ದಾರೆ.

ಇದನ್ನೂಓದಿ: ಕಾಫಿನಾಡಿನಲ್ಲಿ ಹುಲಿ, ಕಾಡಾನೆ ಹಾವಳಿ: 5 ಜಾನುವಾರು ಸಾವು, ಬೆಳೆ ನಾಶ - Wild Elephants Menace

ETV Bharat Logo

Copyright © 2024 Ushodaya Enterprises Pvt. Ltd., All Rights Reserved.