ETV Bharat / state

ಎನ್​ಐಎ ವಿಚಾರಣೆ ಮುಗಿಸಿ ಬಂದ ತೀರ್ಥಹಳ್ಳಿಯ ಬಿಜೆಪಿ ಕಾರ್ಯಕರ್ತ ಹೇಳಿದ್ದೇನು? - RAMESHWARAM CAFE BLAST CASE

author img

By ETV Bharat Karnataka Team

Published : Apr 6, 2024, 4:21 PM IST

Updated : Apr 6, 2024, 5:32 PM IST

ಬಿಜೆಪಿ ಕಾರ್ಯಕರ್ತ  ಸಾಯಿ ಪ್ರಸಾದ್​
ಬಿಜೆಪಿ ಕಾರ್ಯಕರ್ತ ಸಾಯಿ ಪ್ರಸಾದ್​

ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದಲ್ಲಿ ಎನ್​ಐಎ ವಿಚಾರಣೆಗೊಳಗಾಗಿದ್ದ ತೀರ್ಥಹಳ್ಳಿಯ ಬಿಜೆಪಿ ಕಾರ್ಯಕರ್ತ ಸಾಯಿ ಪ್ರಸಾದ್​ ಹೊರಬಂದಿದ್ದಾರೆ.

ತೀರ್ಥಹಳ್ಳಿಯ ಬಿಜೆಪಿ ಕಾರ್ಯಕರ್ತ ಸಾಯಿ ಪ್ರಸಾದ್​ ಹೇಳಿಕೆ

ಶಿವಮೊಗ್ಗ : ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದಲ್ಲಿ ತೀರ್ಥಹಳ್ಳಿಯ ಬಿಜೆಪಿ ಕಾರ್ಯಕರ್ತ ಸಾಯಿ ಪ್ರಸಾದ್ ಅವರನ್ನು ವಶಕ್ಕೆ ಪಡೆದಿದ್ದ ಎನ್​ಐಎ ತಂಡವು ವಿಚಾರಣೆ ನಡೆಸಿ ವಾಪಸ್​ ಕಳುಹಿಸಿದೆ. ಇದರ ಬೆನ್ನಲ್ಲೇ ಸಾಯಿ ಪ್ರಸಾದ್​ ಎನ್​ಐಎ ವಿಚಾರಣೆ ನಡೆಸಿರುವ ಬಗ್ಗೆ ಮಾಹಿತಿ ನೀಡಿದ್ದಾರೆ.

ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ ಸಂಬಂಧ ಮುಜಾಮಿಲ್ ಎಂಬಾತನನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ. ಈ ತನಿಖೆ ಭಾಗವಾಗಿ ನನಗೂ ಸೇರಿ ಮೂವರಿಗೆ ನೋಟಿಸ್ ನೀಡಲಾಗಿತ್ತು. ಜೊತೆಗೆ ನನ್ನ ತಮ್ಮನಿಗೂ ನೋಟಿಸ್ ಬಂದಿತ್ತು. ನಮಗೆ ನೋಟಿಸ್ ಏಕೆ ಕೊಟ್ಟಿದ್ದಾರೆಂದು ತಿಳಿದಿರಲಿಲ್ಲ. ಮತೀನ್ ಎಂಬಾತ ಸಾಯಿ ಸ್ಲ್ಯಾಷ್_ಪಿ ಎಂಬ ಅಕೌಂಟ್ ನಿಂದ ಕ್ರಿಪ್ಟೋ ಕರೆನ್ಸಿ ವ್ಯವಹಾರ ಮಾಡಿದ್ದಾನೆ. ಸಾಯಿ ಪಕ್ಕದಲ್ಲಿ ಪಿ ಇರುವುದರಿಂದ ನನ್ನ ತಮ್ಮ ಹಾಗೂ ನನಗೆ ಕರೆಸಿದ್ದರು ಎಂದು ಬಳಿಕ ಗೊತ್ತಾಯಿತು ಎಂದರು.

ಭವಿಷ್ಯದ ದೃಷ್ಟಿಯಿಂದ ನಾನು ಕ್ರಿಪ್ಟೋ ಎಂಬ ಅಧಿಕೃತ ಆ್ಯಪ್ ಮೂಲಕ ಶೇರ್ ನಲ್ಲಿ ಹಣ ಹೂಡಿಕೆ ಮಾಡಿದ್ದೇನೆ. ಅದು ನನ್ನ ಬ್ಯಾಂಕ್ ಮೂಲಕವೇ ಕೆವೈಸಿ ಬಳಸಿ ಮಾಡಿದ್ದೇನೆ. ಈ ಬಗ್ಗೆ ಅಧಿಕಾರಿಗಳಿಗೆ ನಾನು ತಿಳಿಸಿದ್ದೇನೆ. ಹೀಗಾಗಿ ಎಲ್ಲಾ ರೀತಿಯಲ್ಲೂ ಅಧಿಕಾರಿಗಳು ತನಿಖೆ ಮಾಡಿ ಕಳುಹಿಸಿದ್ದಾರೆ. ಜೊತೆಗೆ ಮುಜಾಮಿಲ್​ನನ್ನು ವಿಚಾರಣೆ ಮಾಡಿ ಕಳಿಸಿದ್ದಾರೆ. ನಾವು ಅವರು ಸ್ನೇಹಿತರು ಅಷ್ಟೇ. ಅವರ ಕೆಲಸವೇನಾದರೂ ಇದ್ದರೆ ನಾನು ಮಾಡಿಕೊಡುತ್ತಿದ್ದೆ. ಅವರ ಅಂಗಡಿಯಲ್ಲಿ ಮೊಬೈಲ್ ಖರೀದಿ ಮಾಡಿದ್ದೇವೆ. ಆರೋಗ್ಯಕರ ವ್ಯವಹಾರ ಮಾಡುತ್ತಿದ್ದೇವೆ. ಈ ಬಗ್ಗೆ ಅಧಿಕಾರಿಗಳಿಗೆ ಮನವರಿಕೆ ಮಾಡಕೊಟ್ಟಿದ್ದೇನೆ. ನಾನು ಅವರಿಗೆ ಕ್ರಿಪ್ಟೋ ಆ್ಯಪ್ ಬಳಕೆ ಬಗ್ಗೆ ತಿಳಿಸಿಕೊಟ್ಟಿದ್ದು, ಈ ವೇಳೆ ಬೇರೇನೂ ವ್ಯವಹಾರ ಅಧಿಕಾರಿಗಳಿಗೆ ಕಂಡು ಬಂದಿಲ್ಲ ಸಾಯಿ ಪ್ರಸಾದ್​ ತಿಳಿಸಿದ್ದಾರೆ.

ದೇಶದ ವಿಚಾರ ಬಂದಾಗ ಪಕ್ಷ ಜಾತಿ ಎಂಬುದು ಬರಲ್ಲ. ಈ ಪ್ರಕರಣದಿಂದ ಯುವಕರು ಎಚ್ಚರವಾಗಿರಬೇಕು. ಎಲ್ಲಿ ಬೇಕಲ್ಲಿ ದಾಖಲೆ ಪತ್ರಗಳು ಜೆರಾಕ್ಸ್, ಸ್ಕ್ಯಾನಿಂಗ್ ಮಾಡಿಸಬಾರದು. ಕುವೆಂಪು ಊರು, ನಾಡು ತೀರ್ಥಹಳ್ಳಿ ಎನ್ನುತ್ತಿದ್ದೆವು. ಈಗ ಉಗ್ರರ ನಾಡಾಗಿ ಪರಿವರ್ತನೆ ಆಗಿದೆ. ನಾನೊಬ್ಬ ಬಿಜೆಪಿ ಸಣ್ಣ ಕಾರ್ಯಕರ್ತ ಅಷ್ಟೇ. ಯಾವುದೇ ಮುಖಂಡ, ನಾಯಕನಲ್ಲ. ಸಣ್ಣಪುಟ್ಟ ಪೇಂಟಿಂಗ್ ಮಾಡಿಕೊಂಡು ಬದುಕುತ್ತಿದ್ದೇವೆ. ಸುಖಾಸುಮ್ಮನೆ ಗೊತ್ತಿಲ್ಲದೇ ಆರೋಪ ಮಾಡಬಾರದು. ಮೊದಲು ವಿಚಾರಪೂರ್ತಿ ತಿಳಿದುಕೊಳ್ಳಿ. ತಪ್ಪಿದ್ದರೆ ನೇರವಾಗಿ ಗುಂಡು ಹೊಡೆಯಿರಿ. ಇಂತಹ ಕೆಲಸ ಮಾಡುತ್ತೇವೆ ಎಂದು ತಿಳಿದರೆ, ಮನೆಯಲ್ಲೇ ಮೊದಲು ಹೊಡೆಯುತ್ತಾರೆ.

ಈ ವಿಚಾರದಲ್ಲಿ ನನ್ನದೇನೂ ತಪ್ಪಿಲ್ಲ. ನಾವು ಯಾವುದೇ ದೇಶ ವಿರೋಧಿ ಚಟುವಟಿಕೆ ಮಾಡಲ್ಲ. ನಾನು ಹಿಂದೂಪರ ಸಂಘಟನೆಯಲ್ಲಿದ್ದೇನೆ. ಹುಟ್ಟಿನಿಂದಲೂ ಆ ಬುದ್ಧಿ ನಮಗೆ ಬಂದಿಲ್ಲ. ನಾಳೆ ನಿಮ್ಮ ಮಕ್ಕಳು ಕೂಡ ಇದರಲ್ಲಿ ಸಿಕ್ಕಿಹಾಕಿಕೊಳ್ಳುವ ಸಾಧ್ಯತೆ ಇರುತ್ತದೆ. ಹೀಗಾಗಿ ನೋಡಿಕೊಂಡು ಆರೋಪ ಮಾಡಿ ಎಂದು ಸಾಯಿ ಪ್ರಸಾದ್ ಮನವಿ ಮಾಡಿದರು.

ಇದನ್ನು ಓದಿ : ಎನ್​ಐಎ ತೀರ್ಥಹಳ್ಳಿಯ ಸಾಯಿ ಪ್ರಸಾದ್​ನನ್ನು ವಿಚಾರಣೆಗೆ ಒಳಪಡಿಸಿ ವಾಪಸ್ ಕಳುಹಿಸಿದೆ: ಆರಗ ಜ್ಞಾನೇಂದ್ರ - Araga Jnanendra

Last Updated :Apr 6, 2024, 5:32 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.