ETV Bharat / state

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: ಜಯಪ್ರಕಾಶ್ ಹೆಗ್ಡೆ, ಕೋಟ ಶ್ರೀನಿವಾಸ್ ಪೂಜಾರಿ ನಾಮಪತ್ರ ಸಲ್ಲಿಕೆ - ELECTION NOMINATION

author img

By ETV Bharat Karnataka Team

Published : Apr 3, 2024, 7:35 PM IST

udupi-chikkamagaluru-lok-sabha-constituency-bjp-and-congress-candidates-submits-nomination-papers
ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: ಜಯಪ್ರಕಾಶ್ ಹೆಗ್ಡೆ, ಕೋಟಾ ಶ್ರೀನಿವಾಸ್ ಪೂಜಾರಿ ನಾಮಪತ್ರ ಸಲ್ಲಿಕೆ

ಉಡುಪಿ - ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್​ ಮತ್ತು ಬಿಜೆಪಿ ಅಭ್ಯರ್ಥಿಗಳು ಇಂದು ಉಮೇದುವಾರಿಕೆ ಸಲ್ಲಿಸಿದ್ದಾರೆ.

ಚಿಕ್ಕಮಗಳೂರು: ಉಡುಪಿ - ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೇಸ್ ಅಭ್ಯರ್ಥಿಯಾಗಿ ಜಯಪ್ರಕಾಶ್ ಹೆಗ್ಡೆ ಇಂದು ನಾಮಪತ್ರ ಸಲ್ಲಿಸಿದ್ದಾರೆ. ಉಡುಪಿ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಡಿಸಿಗೆ ಅವರು ನಾಮಪತ್ರ ಸಲ್ಲಿಸಿದರು. ಈ ವೇಳೆ ಜಿಲ್ಲಾ ಉಸ್ತುವಾರಿ ಸಚಿವ ಕೆ. ಜೆ. ಜಾರ್ಜ್, ಮಾಜಿ ಶಾಸಕ ವಿನಯ ಕುಮಾರ ಸೊರಕೆ, ಶ್ರೀಮತಿ ಮೋಟಮ್ಮ, ಶ್ರೀ ಅಂಶುಮಂತ್ ಜೊತೆಗಿದ್ದರು.

ಇದಕ್ಕೂ ಮುನ್ನ ಜಯಪ್ರಕಾಶ್ ಹೆಗ್ಡೆ ಮನೆದೇವರಿಗೆ ಪ್ರಾರ್ಥನೆ ಸಲ್ಲಿಸಿದರು. ಈ ವೇಳೆ ಅಡಿಕೆ ಹಿಂಗಾರನ್ನು ಪ್ರಸಾದವಾಗಿ ಮನೆದೇವರು ಜಯಪ್ರಕಾಶ್ ಹೆಗ್ಡೆಗೆ ನೀಡಿದೆ. ಪೂಜೆಯಲ್ಲಿ ಕುಟುಂಬಸ್ಥರು ಪಾಲ್ಗೊಂಡಿದ್ದರು.

ಉಮೇದುವಾರಿಕೆ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಕೋಟ: ಮತ್ತೊಂದೆಡೆ, ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಬೃಹತ್​ ಮೆರವಣಿಗೆ ಮೂಲಕ ರಜತಾದ್ರಿ ಡಿಸಿ ಕಚೇರಿಗೆ ಆಗಮಿಸಿ ಚುನಾವಣಾಧಿಕಾರಿ ಡಾ ಕೆ. ವಿದ್ಯಾಕುಮಾರಿ ಅವರಿಗೆ ಉಮೇದುವಾರಿಕೆ ಸಲ್ಲಿಸಿದರು. ಸಿ.ಟಿ ರವಿ, ಜೆಡಿಎಸ್ ಎಂಎಲ್​ಸಿ ಭೋಜೇಗೌಡ, ಯಶ್​ಪಾಲ್​ ಸುವರ್ಣ, ಗುರ್ಮೆ ಸುರೇಶ್ ಜೊತೆಗಿದ್ದರು.

ಇದನ್ನೂ ಓದಿ: ನಾಮಪತ್ರ ಭರಾಟೆ ಬಿರುಸು: ಪ್ರೊ. ರಾಜೀವ್ ಗೌಡ, ಮನ್ಸೂರ್ ಅಲಿಖಾನ್ ಉಮೇದುವಾರಿಕೆ ಸಲ್ಲಿಕೆ - ELECTION NOMINATION SUBMISSION

ETV Bharat Logo

Copyright © 2024 Ushodaya Enterprises Pvt. Ltd., All Rights Reserved.