ETV Bharat / state

ಎಂಇಎಸ್ ನಿಷೇಧಿಸಿ, ಮರಾಠಿಗರನ್ನು ಗಡಿಪಾರು ಮಾಡಿ; ಬೆಳಗಾವಿಯಲ್ಲಿ ವಾಟಾಳ್ ನಾಗರಾಜ್​ ಆಗ್ರಹ - VATAL NAGARAJ PROTEST

ಎಂಇಎಸ್​ ನಿಷೇಧಿಸಿ, ಮರಾಠಿಯವರನ್ನ ಗಡಿಪಾರು ಮಾಡುವಂತೆ ಒತ್ತಾಯಿಸಿ ವಾಟಾಳ್​ ನಾಗರಾಜ್​ ನೇತೃತ್ವದಲ್ಲಿ ಇಂದು ಬೆಳಗಾವಿಯಲ್ಲಿ ಪ್ರತಿಭಟನೆ ನಡೆಸಲಾಯಿತು.

protest
ಕನ್ನಡಪರ ಸಂಘಟನೆಗಳಿಂದ ಪ್ರತಿಭಟನೆ (ETV Bharat)
author img

By ETV Bharat Karnataka Team

Published : March 10, 2025 at 3:26 PM IST

Updated : March 10, 2025 at 5:48 PM IST

2 Min Read

ಬೆಳಗಾವಿ : ಮರಾಠಿಗರನ್ನು ಗಡಿಪಾರು ಮಾಡಬೇಕು. ಎಂಇಎಸ್ ನಿಷೇಧಿಸಬೇಕು. ಕನ್ನಡಿಗ ಕಂಡಕ್ಟರ್ ಮೇಲೆ ಹಲ್ಲೆ ಮಾಡಿದ ಕಿಡಿಗೇಡಿಗಳಿಗೆ ಕಠಿಣ ಶಿಕ್ಷೆ ವಿಧಿಸುವುದು ಸೇರಿ‌ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ, ಸೋಮವಾರ ನಗರದಲ್ಲಿ ಕನ್ನಡ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ವಿವಿಧ ಕನ್ನಡ ಸಂಘಟನೆಗಳ ಮುಖಂಡರು ಪ್ರತಿಭಟಿಸಿದರು.

ಬೆಳಗಾವಿ ರಾಣಿ ಚನ್ನಮ್ಮ ವೃತ್ತದಲ್ಲಿ ಸಮಾವೇಶಗೊಂಡ ವಿವಿಧ ಕನ್ನಡ ಸಂಘಟನೆಗಳ ಮುಖಂಡರು, ರಸ್ತೆ ತಡೆ ನಡೆಸಿ ಎಂಇಎಸ್ ವಿರುದ್ಧ ಧಿಕ್ಕಾರ ಕೂಗಿದರು. ’ಯಾರಪ್ಪಂದ ಏನೈತಿ, ಬೆಳಗಾವಿ ನಮ್ಮದೈತಿ’ ಎಂದು ಘೋಷಣೆ ಮೊಳಗಿಸಿದರು.

ಕನ್ನಡ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್ ಹಾಗೂ ಹಿರಿಯ ಕನ್ನಡ ಹೋರಾಟಗಾರ ಸಾ.ರಾ ಗೋವಿಂದ ಅವರು ಮಾತನಾಡಿದರು (ETV Bharat)

ಗಡಿ, ಭಾಷೆ ವಿಚಾರದಲ್ಲಿ ಬೆಳಗಾವಿಯಲ್ಲಿ ಪದೇ ಪದೆ ಎಂಇಎಸ್ ಕನ್ನಡಿಗರ ಮೇಲೆ ದಬ್ಬಾಳಿಕೆ ಮಾಡುತ್ತಿದೆ. ಕನ್ನಡ ಭಾಷೆಗೆ ಧಕ್ಕೆ ತರುತ್ತಿದೆ. ಮುಗ್ದ ಮರಾಠಿಗರನ್ನು ಕನ್ನಡಿಗರ ಮೇಲೆ ಎತ್ತಿ ಕಟ್ಟುವ ಕೆಲಸ ಮಾಡುತ್ತಿದೆ. ಇದನ್ನು ಕನ್ನಡಿಗರು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ. ತಕ್ಷಣವೇ ಕರ್ನಾಟಕ ಸರ್ಕಾರ ಎಚ್ಚೆತ್ತುಕೊಂಡು ರಾಜ್ಯದಲ್ಲಿ ಎಂಇಎಸ್ ನಿಷೇಧಿಸಬೇಕು. ಬೆಳಗಾವಿಯಲ್ಲಿ ಶಾಂತಿ ಕದಡಲು ಯತ್ನಿಸುವವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವಂತೆ ಕನ್ನಡ ಹೋರಾಟಗಾರರು ಒತ್ತಾಯಿಸಿದರು.

ಅಧಿವೇಶನ ನಡೆಸಲು ಬಿಡುವುದಿಲ್ಲ: ಈ ಕುರಿತು ಮಾಧ್ಯಮಗಳ ಜೊತೆಗೆ ಮಾತನಾಡಿದ ವಾಟಾಳ್ ನಾಗರಾಜ್, 'ಬೆಳಗಾವಿಯಲ್ಲಿ ಏನು ಆಗುತ್ತಿದೆ ಎಂಬುದು ಕರ್ನಾಟಕ ಸರ್ಕಾರಕ್ಕೆ ಗೊತ್ತಿಲ್ಲ. ಹಿಂದೆ ಬೊಮ್ಮಾಯಿ ಸರ್ಕಾರ ಎಂಇಎಸ್ ನಿಷೇಧಿಸುವ ಭರವಸೆ ನೀಡಿತ್ತು. ಆದರೆ, ಅದು ಕಾರ್ಯರೂಪಕ್ಕೆ ಬರಲಿಲ್ಲ. ಹಾಗಾಗಿ, ಸಿದ್ದರಾಮಯ್ಯ ಸರ್ಕಾರ ಕೂಡಲೇ ಎಂಇಎಸ್ ನಿಷೇಧಿಸಬೇಕು. ಇಲ್ಲದಿದ್ದರೆ ಮುಂದಿನ ಬಾರಿ ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ಅಧಿವೇಶನ ನಡೆಸಲು ಬಿಡುವುದಿಲ್ಲ' ಎಂದು ಎಚ್ಚರಿಸಿದರು‌.

ಸುವರ್ಣ ವಿಧಾನಸೌಧದಲ್ಲಿ ತಿಂಗಳಿಗೆ ಮೂವರು ಸಚಿವರು ಕುಳಿತುಕೊಂಡು ಇಲ್ಲಿನ ಪರಿಸ್ಥಿತಿ ಅವಲೋಕಿಸಬೇಕು. ಇಲ್ಲಿನ ಎಲ್ಲ ಪಕ್ಷಗಳ ರಾಜಕಾರಣಿಗಳು ಎಂಇಎಸ್ ಏಜೆಂಟ್​​ಗಳಾಗಿದ್ದಾರೆ. ಅವರ ಮತಕ್ಕಾಗಿ ತಮ್ಮ ಅಸ್ತಿತ್ವವನ್ನೇ ಮಾರಿಕೊಂಡಿದ್ದಾರೆ. ಇದು ಅತ್ಯಂತ ಭಯಾನಕ ವಿಚಾರ. ಹಾಗಾಗಿ, ಬೆಳಗಾವಿಗೆ ಎಂಇಎಸ್ ಬೇಡ. ಇನ್ನು ಮಹದಾಯಿ, ಮೇಕೆದಾಟು ಯೋಜನೆ ಸೇರಿ‌ ವಿವಿಧ ಬೇಡಿಕೆ ಈಡೇರಿಸುವಂತೆ ಮಾರ್ಚ್ 22ರಂದು‌ ಕರ್ನಾಟಕ‌ ಬಂದ್​​ಗೆ ಕರೆ ನೀಡಿದ್ದೇವೆ ಎಂದು ತಿಳಿಸಿದರು.

ಕನ್ನಡಿಗರಿಗೆ ರಕ್ಷಣೆ ಕೊಡಲೇಬೇಕು: ಮತ್ತೋರ್ವ ಹಿರಿಯ ಕನ್ನಡ ಹೋರಾಟಗಾರ ಸಾ.ರಾ ಗೋವಿಂದ ಮಾತನಾಡಿ, ಮಹಾರಾಷ್ಟ್ರ ರಾಜಕಾರಣಿಗಳು ಎಂಇಎಸ್​ನವರಿಗೆ ಕುಮ್ಮಕ್ಕು ನೀಡುತ್ತಿದ್ದಾರೆ. ಕಳೆದ 40 ವರ್ಷಗಳಿಂದ ಕನ್ನಡ ನೆಲದಲ್ಲಿ ಇಲ್ಲಿನ ಕಂಡಕ್ಟರ್ ಮತ್ತು ಚಾಲಕರ ಮೇಲೆ ಹಲ್ಲೆ ಮಾಡುತ್ತಾ ಬಂದಿದ್ದಾರೆ. ಕರ್ನಾಟಕ ರಾಜಕಾರಣಿಗಳು ಕೂಡ ಇಂಥವರನ್ನ ಬೆಳೆಸುತ್ತಿದ್ದಾರೆ. ಯಾವುದೇ ಕಾರಣಕ್ಕೂ ಎಂಇಎಸ್ ರಾಜ್ಯದಲ್ಲಿ ಮುಂದುವರಿಯಬಾರದು. ಅದನ್ನು ನಿಷೇಧಿಸಬೇಕು. ಬೆಳಗಾವಿಯಲ್ಲಿ ಕನ್ನಡಿಗರಿಗೆ ರಕ್ಷಣೆ ಕೊಡಲೇಬೇಕು. ಇಲ್ಲದಿದ್ದರೆ ಮುಂದೆ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು.

ಬಳಿಕ ವಾಟಾಳ್ ನಾಗರಾಜ್, ಸಾ. ರಾ ಗೋವಿಂದ, ಎಲ್. ಆರ್ ಶಿವರಾಮೇಗೌಡ, ರೂಪೇಶ ರಾಜಣ್ಣ ಸೇರಿ ಮತ್ತಿತರ ಮುಖಂಡರು ಕಿತ್ತೂರು ರಾಣಿ ಚನ್ನಮ್ಮ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.

ಇದನ್ನೂ ಓದಿ : ಆಕಾಶ ಭೂಮಿಗೆ ಇಳಿದರೂ ಸರಿಯೇ, ಬಂದ್ ದಿನಾಂಕ ಬದಲಾಯಿಸುವುದಿಲ್ಲ : ‌ವಾಟಾಳ್ ನಾಗರಾಜ್ - VATAL NAGARAJ

ಬೆಳಗಾವಿ : ಮರಾಠಿಗರನ್ನು ಗಡಿಪಾರು ಮಾಡಬೇಕು. ಎಂಇಎಸ್ ನಿಷೇಧಿಸಬೇಕು. ಕನ್ನಡಿಗ ಕಂಡಕ್ಟರ್ ಮೇಲೆ ಹಲ್ಲೆ ಮಾಡಿದ ಕಿಡಿಗೇಡಿಗಳಿಗೆ ಕಠಿಣ ಶಿಕ್ಷೆ ವಿಧಿಸುವುದು ಸೇರಿ‌ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ, ಸೋಮವಾರ ನಗರದಲ್ಲಿ ಕನ್ನಡ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ವಿವಿಧ ಕನ್ನಡ ಸಂಘಟನೆಗಳ ಮುಖಂಡರು ಪ್ರತಿಭಟಿಸಿದರು.

ಬೆಳಗಾವಿ ರಾಣಿ ಚನ್ನಮ್ಮ ವೃತ್ತದಲ್ಲಿ ಸಮಾವೇಶಗೊಂಡ ವಿವಿಧ ಕನ್ನಡ ಸಂಘಟನೆಗಳ ಮುಖಂಡರು, ರಸ್ತೆ ತಡೆ ನಡೆಸಿ ಎಂಇಎಸ್ ವಿರುದ್ಧ ಧಿಕ್ಕಾರ ಕೂಗಿದರು. ’ಯಾರಪ್ಪಂದ ಏನೈತಿ, ಬೆಳಗಾವಿ ನಮ್ಮದೈತಿ’ ಎಂದು ಘೋಷಣೆ ಮೊಳಗಿಸಿದರು.

ಕನ್ನಡ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್ ಹಾಗೂ ಹಿರಿಯ ಕನ್ನಡ ಹೋರಾಟಗಾರ ಸಾ.ರಾ ಗೋವಿಂದ ಅವರು ಮಾತನಾಡಿದರು (ETV Bharat)

ಗಡಿ, ಭಾಷೆ ವಿಚಾರದಲ್ಲಿ ಬೆಳಗಾವಿಯಲ್ಲಿ ಪದೇ ಪದೆ ಎಂಇಎಸ್ ಕನ್ನಡಿಗರ ಮೇಲೆ ದಬ್ಬಾಳಿಕೆ ಮಾಡುತ್ತಿದೆ. ಕನ್ನಡ ಭಾಷೆಗೆ ಧಕ್ಕೆ ತರುತ್ತಿದೆ. ಮುಗ್ದ ಮರಾಠಿಗರನ್ನು ಕನ್ನಡಿಗರ ಮೇಲೆ ಎತ್ತಿ ಕಟ್ಟುವ ಕೆಲಸ ಮಾಡುತ್ತಿದೆ. ಇದನ್ನು ಕನ್ನಡಿಗರು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ. ತಕ್ಷಣವೇ ಕರ್ನಾಟಕ ಸರ್ಕಾರ ಎಚ್ಚೆತ್ತುಕೊಂಡು ರಾಜ್ಯದಲ್ಲಿ ಎಂಇಎಸ್ ನಿಷೇಧಿಸಬೇಕು. ಬೆಳಗಾವಿಯಲ್ಲಿ ಶಾಂತಿ ಕದಡಲು ಯತ್ನಿಸುವವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವಂತೆ ಕನ್ನಡ ಹೋರಾಟಗಾರರು ಒತ್ತಾಯಿಸಿದರು.

ಅಧಿವೇಶನ ನಡೆಸಲು ಬಿಡುವುದಿಲ್ಲ: ಈ ಕುರಿತು ಮಾಧ್ಯಮಗಳ ಜೊತೆಗೆ ಮಾತನಾಡಿದ ವಾಟಾಳ್ ನಾಗರಾಜ್, 'ಬೆಳಗಾವಿಯಲ್ಲಿ ಏನು ಆಗುತ್ತಿದೆ ಎಂಬುದು ಕರ್ನಾಟಕ ಸರ್ಕಾರಕ್ಕೆ ಗೊತ್ತಿಲ್ಲ. ಹಿಂದೆ ಬೊಮ್ಮಾಯಿ ಸರ್ಕಾರ ಎಂಇಎಸ್ ನಿಷೇಧಿಸುವ ಭರವಸೆ ನೀಡಿತ್ತು. ಆದರೆ, ಅದು ಕಾರ್ಯರೂಪಕ್ಕೆ ಬರಲಿಲ್ಲ. ಹಾಗಾಗಿ, ಸಿದ್ದರಾಮಯ್ಯ ಸರ್ಕಾರ ಕೂಡಲೇ ಎಂಇಎಸ್ ನಿಷೇಧಿಸಬೇಕು. ಇಲ್ಲದಿದ್ದರೆ ಮುಂದಿನ ಬಾರಿ ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ಅಧಿವೇಶನ ನಡೆಸಲು ಬಿಡುವುದಿಲ್ಲ' ಎಂದು ಎಚ್ಚರಿಸಿದರು‌.

ಸುವರ್ಣ ವಿಧಾನಸೌಧದಲ್ಲಿ ತಿಂಗಳಿಗೆ ಮೂವರು ಸಚಿವರು ಕುಳಿತುಕೊಂಡು ಇಲ್ಲಿನ ಪರಿಸ್ಥಿತಿ ಅವಲೋಕಿಸಬೇಕು. ಇಲ್ಲಿನ ಎಲ್ಲ ಪಕ್ಷಗಳ ರಾಜಕಾರಣಿಗಳು ಎಂಇಎಸ್ ಏಜೆಂಟ್​​ಗಳಾಗಿದ್ದಾರೆ. ಅವರ ಮತಕ್ಕಾಗಿ ತಮ್ಮ ಅಸ್ತಿತ್ವವನ್ನೇ ಮಾರಿಕೊಂಡಿದ್ದಾರೆ. ಇದು ಅತ್ಯಂತ ಭಯಾನಕ ವಿಚಾರ. ಹಾಗಾಗಿ, ಬೆಳಗಾವಿಗೆ ಎಂಇಎಸ್ ಬೇಡ. ಇನ್ನು ಮಹದಾಯಿ, ಮೇಕೆದಾಟು ಯೋಜನೆ ಸೇರಿ‌ ವಿವಿಧ ಬೇಡಿಕೆ ಈಡೇರಿಸುವಂತೆ ಮಾರ್ಚ್ 22ರಂದು‌ ಕರ್ನಾಟಕ‌ ಬಂದ್​​ಗೆ ಕರೆ ನೀಡಿದ್ದೇವೆ ಎಂದು ತಿಳಿಸಿದರು.

ಕನ್ನಡಿಗರಿಗೆ ರಕ್ಷಣೆ ಕೊಡಲೇಬೇಕು: ಮತ್ತೋರ್ವ ಹಿರಿಯ ಕನ್ನಡ ಹೋರಾಟಗಾರ ಸಾ.ರಾ ಗೋವಿಂದ ಮಾತನಾಡಿ, ಮಹಾರಾಷ್ಟ್ರ ರಾಜಕಾರಣಿಗಳು ಎಂಇಎಸ್​ನವರಿಗೆ ಕುಮ್ಮಕ್ಕು ನೀಡುತ್ತಿದ್ದಾರೆ. ಕಳೆದ 40 ವರ್ಷಗಳಿಂದ ಕನ್ನಡ ನೆಲದಲ್ಲಿ ಇಲ್ಲಿನ ಕಂಡಕ್ಟರ್ ಮತ್ತು ಚಾಲಕರ ಮೇಲೆ ಹಲ್ಲೆ ಮಾಡುತ್ತಾ ಬಂದಿದ್ದಾರೆ. ಕರ್ನಾಟಕ ರಾಜಕಾರಣಿಗಳು ಕೂಡ ಇಂಥವರನ್ನ ಬೆಳೆಸುತ್ತಿದ್ದಾರೆ. ಯಾವುದೇ ಕಾರಣಕ್ಕೂ ಎಂಇಎಸ್ ರಾಜ್ಯದಲ್ಲಿ ಮುಂದುವರಿಯಬಾರದು. ಅದನ್ನು ನಿಷೇಧಿಸಬೇಕು. ಬೆಳಗಾವಿಯಲ್ಲಿ ಕನ್ನಡಿಗರಿಗೆ ರಕ್ಷಣೆ ಕೊಡಲೇಬೇಕು. ಇಲ್ಲದಿದ್ದರೆ ಮುಂದೆ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು.

ಬಳಿಕ ವಾಟಾಳ್ ನಾಗರಾಜ್, ಸಾ. ರಾ ಗೋವಿಂದ, ಎಲ್. ಆರ್ ಶಿವರಾಮೇಗೌಡ, ರೂಪೇಶ ರಾಜಣ್ಣ ಸೇರಿ ಮತ್ತಿತರ ಮುಖಂಡರು ಕಿತ್ತೂರು ರಾಣಿ ಚನ್ನಮ್ಮ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.

ಇದನ್ನೂ ಓದಿ : ಆಕಾಶ ಭೂಮಿಗೆ ಇಳಿದರೂ ಸರಿಯೇ, ಬಂದ್ ದಿನಾಂಕ ಬದಲಾಯಿಸುವುದಿಲ್ಲ : ‌ವಾಟಾಳ್ ನಾಗರಾಜ್ - VATAL NAGARAJ

Last Updated : March 10, 2025 at 5:48 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.