ETV Bharat / state

ವಿಜಯಪುರ: ಕೂಡಗಿ ಎನ್‌ಟಿಪಿಸಿ ಘಟಕದಲ್ಲಿ ಕಾರ್ಮಿಕ ಸಾವು ಪ್ರಕರಣ, ಮೂವರ ವಿರುದ್ಧ ಕೇಸ್ - NTPC worker death case

author img

By ETV Bharat Karnataka Team

Published : May 16, 2024, 8:58 PM IST

Updated : May 16, 2024, 9:03 PM IST

ವಿಜಯಪುರ ಜಿಲ್ಲೆಯ ಕೂಡಗಿ ಎನ್‌ಟಿಪಿಸಿ ಘಟಕದಲ್ಲಿ ಕಾರ್ಮಿಕನ ಸಾವು ಪ್ರಕರಣದ ಕುರಿತು ಮೂವರ ವಿರುದ್ಧ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Kudgi NTPC unit
ಕೂಡಗಿ ಎನ್‌ಟಿಪಿಸಿ ಘಟಕ (ETV Bharat)

ವಿಜಯಪುರ: ಕೂಡಗಿಯ ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ (ಎನ್‌ಟಿಪಿಸಿ) ಘಟಕದಲ್ಲಿ ಕಾರ್ಮಿಕನ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ನಿರ್ಲಕ್ಷ್ಯ ಆರೋಪದಡಿ ಮೂವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಜಿಲ್ಲೆಯ ಕೊಲ್ಹಾರ ಪಟ್ಟಣದ ಕೂಡಗಿ ಎನ್‌ಟಿಪಿಸಿ ಘಟಕದಲ್ಲಿ ಮಂಗಳವಾರ ಸಂಜೆ ಉತ್ತರ ಪ್ರದೇಶ ಮೂಲದ ಕಿಶನ್ ಕುಮಾರ್ ಭಾರದ್ವಾಜ್ (33) ಎಂಬ ಕಾರ್ಮಿಕ ಮೃತಪಟ್ಟಿದ್ದ. 150 ಅಡಿ ಎತ್ತರದಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕನಿಗೆ ಸುರಕ್ಷಿತ ಉಪಕರಣಗಳನ್ನು ನೀಡದೇ ನಿರ್ಲಕ್ಷ್ಯವಹಿಸಲಾಗಿದೆ ಎಂದು ಆರೋಪಿಸಲಾಗಿದೆ. ಈ ಬಗ್ಗೆ ಉತ್ತರ ಪ್ರದೇಶ ಮೂಲದ ಹವಾಲ್ದಾರ್ ನೀಡಿದ ದೂರಿನ ಮೇರೆಗೆ ಕೂಡಗಿ ಎನ್‌ಟಿಪಿಸಿ ಪೊಲೀಸ ಠಾಣೆಯಲ್ಲಿ ಬ್ಯಾಗಿಂಗ್ ಕಂಪನಿಯ ಸೈಟ್ ಇನ್‌ಚಾರ್ಜ್, ಸೂಪರ್ವೈಜರ್, ಸೈಟ್ ಮ್ಯಾನೇಜರ್ ವಿರುದ್ಧ ಕೇಸ್ ದಾಖಲಾಗಿದೆ.

ಇನ್ನು, ಮೃತನ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕೆಂದು ಆಗ್ರಹಿಸಿ ಎನ್​ಟಿಪಿಸಿ ಘಟಕದ ಎದುರು ಕಾರ್ಮಿಕರು ಪ್ರತಿಭಟನೆ ನಡೆಸಿದ್ದರು. ನಂತರ ಎನ್‌ಟಿಪಿಸಿ ಅಧಿಕಾರಿಗಳು ಮತ್ತು ಕಾರ್ಮಿಕ ಮುಖಂಡರ ಸಭೆ ನಡೆಸಿ, ಕುಟುಂಬಕ್ಕೆ ಸೂಕ್ತ ಪರಿಹಾರ ಹಾಗೂ ಉದ್ಯೋಗದ ಭರವಸೆ ನೀಡಿದ ನಂತರ ಪ್ರತಿಭಟನೆ ಕೈಬಿಡಲಾಗಿತ್ತು. ಮೃತ ದೇಹವನ್ನು ಉತ್ತರ ಪ್ರದೇಶಕ್ಕೆ ಕೊಂಡೊಯ್ಯಲು ಕಂಪನಿಯೇ ವ್ಯವಸ್ಥೆ ಮಾಡಿದೆ ಎಂದು ಮುಖಂಡರು ತಿಳಿಸಿದ್ದರು.

ಇದನ್ನೂ ಓದಿ: ಕೂಡಗಿ ಉಷ್ಣ ವಿದ್ಯುತ್ ಸ್ಥಾವರದಲ್ಲಿ ಆಯತಪ್ಪಿ ಬಿದ್ದು ಕಾರ್ಮಿಕ ಸಾವು

Last Updated :May 16, 2024, 9:03 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.