ETV Bharat / state

ಶಿಕಾರಿಪುರ: ಹೋರಿ ಬೆದರಿಸುವ ಸ್ಪರ್ಧೆ, ಹೋರಿ ತಿವಿದು ಯುವಕ ಸಾವು

author img

By ETV Bharat Karnataka Team

Published : Feb 13, 2024, 3:55 PM IST

ಸ್ನೇಹಿತರ ಜೊತೆ ಸ್ಪರ್ಧೆ ನೋಡಲೆಂದು ಬಂದಿದ್ದ ಯುವಕ ಹೋರಿ ತಿವಿತದಿಂದ ಸಾವನ್ನಪ್ಪಿರುವ ಘಟನೆ ಶಿಕಾರಿಪುರದಲ್ಲಿ ನಡೆದಿದೆ.

Puneeth Achar
ಪುನೀತ್​ ಆಚಾರ್​

ಶಿವಮೊಗ್ಗ: ಹೋರಿ ಬೆದರಿಸುವ ಸ್ಪರ್ಧೆ ನೋಡಲು ಬಂದಿದ್ದ ಯುವಕನೋರ್ವ ಹೋರಿ ತಿವಿದು ಸಾವನ್ನಪ್ಪಿರುವ ಘಟನೆ ಶಿಕಾರಿಪುರ ತಾಲೂಕಿನ ಕಲ್ಮನೆ ಗ್ರಾಮದಲ್ಲಿ ಸೋಮವಾರ ನಡೆದಿದೆ. ಮೃತನನ್ನು ಪುನೀತ್ ಆಚಾರ್(19) ಎಂದು ಗುರುತಿಸಲಾಗಿದೆ. ಸೋಮವಾರ ಕಲ್ಮನೆ ಗ್ರಾಮದಲ್ಲಿ ಹೋರಿ ಬೆದರಿಸುವ ಸ್ಪರ್ಧೆ ಆಯೋಜನೆ ಮಾಡಲಾಗಿತ್ತು.

ಈ ಸ್ಪರ್ಧೆಯನ್ನು ನೋಡಲು ಪುನೀತ್ ಆಚಾರ್ ತನ್ನ ಸ್ನೇಹಿತರ ಜೊತೆ ಹೋಗಿದ್ದರು. ಈ ವೇಳೆ ಹೋರಿಯು ಪುನೀತ್​ಗೆ ತಿವಿದಿದೆ. ತಕ್ಷಣ ಆತನನ್ನು ಶಿಕಾರಿಪುರ ಆಸ್ಪತ್ರೆಗೆ ದಾಖಲಿಸಲಾಯಿತು. ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಕರೆತರುವ ಸಂದರ್ಭದಲ್ಲಿ ಪುನೀತ್ ಸಾವನ್ನಪ್ಪಿದರು.

ಪುನೀತ್ ದಾವಣಗೆರೆ ಜಿಲ್ಲೆ ನ್ಯಾಮತಿ ತಾಲೂಕಿನ‌ ಹೊಸಮಳಲಿ ಗ್ರಾಮದ ನಿವಾಸಿಯಾಗಿದ್ದು, ಶಿಕಾರಿಪುರದ ಐಟಿಐ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದರು. ಪುನೀತ್ ಅವರ ತಂದೆ ಗಜೇಂದ್ರ ಅವರು ತಮ್ಮ ಮಗನ ಸಾವಿಗೆ ಹೋರಿ ಬೆದರಿಸುವ ಸ್ಪರ್ಧೆ ಆಯೋಜಕರು ಕಾರಣ ಎಂದು ಶಿಕಾರಿಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಇದನ್ನೂ ಓದಿ: ರಸ್ತೆ ಅಪಘಾತದಲ್ಲಿ ಫುಟ್‌ಬಾಲ್‌ ಆಟಗಾರನ ಸಾವು ಪ್ರಕರಣ; ಲಾರಿ ಚಾಲಕನ ಬಂಧನ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.