ETV Bharat / state

ಶಿವಮೊಗ್ಗ: ಸಿಡಿಲು ಬಡಿದು ವ್ಯಕ್ತಿ ಸಾವು, ಮತ್ತೋರ್ವ ಗಂಭೀರ - Heavy Rain In Karnataka

author img

By ETV Bharat Karnataka Team

Published : Apr 20, 2024, 11:02 AM IST

ಶಿವಮೊಗ್ಗ ನಗರದಲ್ಲಿ ಶುಕ್ರವಾರ ಸಂಜೆ ಅರ್ಧ ಗಂಟೆ ಕಾಲ ಮಳೆ ಸುರಿದಿದೆ. ಗುಡುಗು ಸಿಡಿಲಿನೊಂದಿಗೆ ಬಿರುಸಿನ ಮಳೆ ಸುರಿದಿದ್ದು ಹೊಲದಲ್ಲಿ ಕೆಲಸ ಮಾಡುತ್ತಿದ್ದ ಯುವಕನೊಬ್ಬ ಮೃತಪಟ್ಟು, ಮತ್ತೊಬ್ಬ ಗಾಯಗೊಂಡಿರುವ ಘಟನೆ ನಡೆದಿದೆ.

ಶಿವಮೊಗ್ಗ: ಸಿಡಿಲು ಬಡಿದು ಓರ್ವ ಸಾವು, ಮತ್ತೋರ್ವ ಗಂಭೀರ
ಶಿವಮೊಗ್ಗ: ಸಿಡಿಲು ಬಡಿದು ಓರ್ವ ಸಾವು, ಮತ್ತೋರ್ವ ಗಂಭೀರ

ಶಿವಮೊಗ್ಗ: ಸಿಡಿಲು ಬಡಿದು ಯುವ ರೈತನೊಬ್ಬ ಮೃತಪಟ್ಟು, ಇನ್ನೋರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ಶಿವಮೊಗ್ಗ ತಾಲೂಕು ಹರಮಘಟ್ಟ ಗ್ರಾಮದಲ್ಲಿ ನಡೆದಿದೆ. ಶುಕ್ರವಾರ ಸಂಜೆ 6 ಗಂಟೆ ಸುಮಾರು ಹರಮಘಟ್ಟದಲ್ಲಿ ಭಾರಿ ಗಾಳಿ, ಸಿಡಿಲು ಸಹಿತ ಮಳೆ ಸುರಿದಿದೆ. ಈ ವೇಳೆ ಹೊಲದಲ್ಲಿ ಕೆಲಸ ಮಾಡುತ್ತಿದ್ದ ರಾಕೇಶ್ (28) ಎಂಬುವರಿಗೆ ಸಿಡಿಲು ಬಡಿದು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ರಾಕೇಶ್ ಜೊತೆ ಆತನ ಸ್ನೇಹಿತ ರುದ್ರೇಶ್ ಕೂಡ ಇದ್ದ. ಇವರಿಗೂ ಸಿಡಿಲು ತಾಗಿದ್ದರಿಂದ ಗಂಭೀರವಾಗಿ ಗಾಯಗೊಂಡಿದ್ದಾರೆ.

ಇದೇ ದಾರಿಯಲ್ಲಿ ಕುರಿ ಮೇಯಿಸಿಕೊಂಡು ಬರುತ್ತಿದ್ದ ಕುರಿಗಾಯಿಗಳಿಂದ ರಾಕೇಶ್ ಮೃತಟ್ಟಿದ್ದು ಮತ್ತು ರುದ್ರೇಶ್ ಗಾಯಗೊಂಡಿರುವ ವಿಷಯ ತಿಳಿದು ಬಂದಿದೆ. ದೃಶ್ಯ ಕಂಡ ತಕ್ಷಣ ಕುರಿಗಾಯಿಗಳು ಈ ವಿಷಯವನ್ನು ಗ್ರಾಮಕ್ಕೆ ತಲುಪಿಸಿದ್ದಾರೆ. ಕೂಡಲೇ ಗ್ರಾಮಸ್ಥರು ಹೊಲಕ್ಕೆ ತೆರಳಿದಾಗ ಸಾವಿನ ವಿಚಾರ ತಿಳಿದು ಬಂದಿದೆ. ಸದ್ಯ ರಾಕೇಶ್ ಶವವನ್ನು ಶಿವಮೊಗ್ಗಕ್ಕೆ ರವಾನೆ ಮಾಡಲಾಗಿದೆ. ರುದ್ರೇಶನನ್ನು ಶಿವಮೊಗ್ಗದ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶಿವಮೊಗ್ಗ ಸೇರಿದಂತೆ ಹರಮಘಟ್ಟದಲ್ಲಿ ಸುಮಾರು ಅರ್ಧ ಗಂಟೆ ಜೋರಾದ ಮಳೆ ಸುರಿದಿದ್ದು ಹಲವೆಡೆ ಅವಾಂತರ ಸೃಷ್ಟಿಸಿದೆ. ಗುರುವಾರ ಕೂಡ ಮಳೆಯಿಂದ ಓರ್ವ ಮೃತಪಟ್ಟ ವರದಿಯಾಗಿತ್ತು. ಚಲಿಸುತ್ತಿದ್ದ ಬೈಕ್ ಮೇಲೆ ಮರ ಬಿದ್ದ ಪರಿಣಾಮ ದೇಮ್ಲಾಪುರದ ಜಯಂತ್ ಭಟ್(64) ಎಂಬ ಬೈಕ್​ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ತೀರ್ಥಹಳ್ಳಿ ತಾಲೂಕಿನಲ್ಲಿ ನಡೆದಿತ್ತು. ಇನ್ನು ತೀರ್ಥಹಳ್ಳಿ ತಾಲೂಕಿನ ಆಗುಂಬೆ ಘಾಟಿಯಲ್ಲಿಯೂ ಮರ ಬಿದ್ದು ವಾಹನ ಸಂಚಾರ ಸ್ಥಗಿತಗೊಂಡಿತ್ತು.

ಇದನ್ನೂ ಓದಿ: ಶಿವಮೊಗ್ಗ: ಚಲಿಸುತ್ತಿದ್ದ ಬೈಕ್ ಮೇಲೆ ಮರ ಬಿದ್ದು ಸವಾರ ಸಾವು - Biker Died

ಶಿವಮೊಗ್ಗ: ಸಿಡಿಲು ಬಡಿದು ಯುವ ರೈತನೊಬ್ಬ ಮೃತಪಟ್ಟು, ಇನ್ನೋರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ಶಿವಮೊಗ್ಗ ತಾಲೂಕು ಹರಮಘಟ್ಟ ಗ್ರಾಮದಲ್ಲಿ ನಡೆದಿದೆ. ಶುಕ್ರವಾರ ಸಂಜೆ 6 ಗಂಟೆ ಸುಮಾರು ಹರಮಘಟ್ಟದಲ್ಲಿ ಭಾರಿ ಗಾಳಿ, ಸಿಡಿಲು ಸಹಿತ ಮಳೆ ಸುರಿದಿದೆ. ಈ ವೇಳೆ ಹೊಲದಲ್ಲಿ ಕೆಲಸ ಮಾಡುತ್ತಿದ್ದ ರಾಕೇಶ್ (28) ಎಂಬುವರಿಗೆ ಸಿಡಿಲು ಬಡಿದು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ರಾಕೇಶ್ ಜೊತೆ ಆತನ ಸ್ನೇಹಿತ ರುದ್ರೇಶ್ ಕೂಡ ಇದ್ದ. ಇವರಿಗೂ ಸಿಡಿಲು ತಾಗಿದ್ದರಿಂದ ಗಂಭೀರವಾಗಿ ಗಾಯಗೊಂಡಿದ್ದಾರೆ.

ಇದೇ ದಾರಿಯಲ್ಲಿ ಕುರಿ ಮೇಯಿಸಿಕೊಂಡು ಬರುತ್ತಿದ್ದ ಕುರಿಗಾಯಿಗಳಿಂದ ರಾಕೇಶ್ ಮೃತಟ್ಟಿದ್ದು ಮತ್ತು ರುದ್ರೇಶ್ ಗಾಯಗೊಂಡಿರುವ ವಿಷಯ ತಿಳಿದು ಬಂದಿದೆ. ದೃಶ್ಯ ಕಂಡ ತಕ್ಷಣ ಕುರಿಗಾಯಿಗಳು ಈ ವಿಷಯವನ್ನು ಗ್ರಾಮಕ್ಕೆ ತಲುಪಿಸಿದ್ದಾರೆ. ಕೂಡಲೇ ಗ್ರಾಮಸ್ಥರು ಹೊಲಕ್ಕೆ ತೆರಳಿದಾಗ ಸಾವಿನ ವಿಚಾರ ತಿಳಿದು ಬಂದಿದೆ. ಸದ್ಯ ರಾಕೇಶ್ ಶವವನ್ನು ಶಿವಮೊಗ್ಗಕ್ಕೆ ರವಾನೆ ಮಾಡಲಾಗಿದೆ. ರುದ್ರೇಶನನ್ನು ಶಿವಮೊಗ್ಗದ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶಿವಮೊಗ್ಗ ಸೇರಿದಂತೆ ಹರಮಘಟ್ಟದಲ್ಲಿ ಸುಮಾರು ಅರ್ಧ ಗಂಟೆ ಜೋರಾದ ಮಳೆ ಸುರಿದಿದ್ದು ಹಲವೆಡೆ ಅವಾಂತರ ಸೃಷ್ಟಿಸಿದೆ. ಗುರುವಾರ ಕೂಡ ಮಳೆಯಿಂದ ಓರ್ವ ಮೃತಪಟ್ಟ ವರದಿಯಾಗಿತ್ತು. ಚಲಿಸುತ್ತಿದ್ದ ಬೈಕ್ ಮೇಲೆ ಮರ ಬಿದ್ದ ಪರಿಣಾಮ ದೇಮ್ಲಾಪುರದ ಜಯಂತ್ ಭಟ್(64) ಎಂಬ ಬೈಕ್​ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ತೀರ್ಥಹಳ್ಳಿ ತಾಲೂಕಿನಲ್ಲಿ ನಡೆದಿತ್ತು. ಇನ್ನು ತೀರ್ಥಹಳ್ಳಿ ತಾಲೂಕಿನ ಆಗುಂಬೆ ಘಾಟಿಯಲ್ಲಿಯೂ ಮರ ಬಿದ್ದು ವಾಹನ ಸಂಚಾರ ಸ್ಥಗಿತಗೊಂಡಿತ್ತು.

ಇದನ್ನೂ ಓದಿ: ಶಿವಮೊಗ್ಗ: ಚಲಿಸುತ್ತಿದ್ದ ಬೈಕ್ ಮೇಲೆ ಮರ ಬಿದ್ದು ಸವಾರ ಸಾವು - Biker Died

ETV Bharat Logo

Copyright © 2024 Ushodaya Enterprises Pvt. Ltd., All Rights Reserved.