ETV Bharat / state

ಬೆಳಗಾವಿಯಲ್ಲಿ ಗೋವುಗಳ ಅಕ್ರಮ‌ ಸಾಗಾಟ ಆರೋಪ: ಲಾರಿ ತಡೆದು ಚಾಲಕ, ಕ್ಲೀನರ್ ಮೇಲೆ ಯುವಕರಿಂದ ಹಲ್ಲೆ - Illegal cow transport

author img

By ETV Bharat Karnataka Team

Published : Apr 22, 2024, 7:35 AM IST

Updated : Apr 22, 2024, 12:20 PM IST

Etv Bharat
Etv Bharat

ಅಕ್ರಮವಾಗಿ ಗೋವು ಸಾಗಾಟ ಆರೋಪದ ಮೇಲೆ ಲಾರಿ ತಡೆದು, ಚಾಲಕನ ಮೇಲೆ ಯುವಕರು ಹಲ್ಲೆ ಮಾಡಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.

ಬೆಳಗಾವಿಯಲ್ಲಿ ಗೋವುಗಳ ಅಕ್ರಮ‌ ಸಾಗಾಟ ಆರೋಪ

ಬೆಳಗಾವಿ: ಅಕ್ರಮವಾಗಿ ಗೋವು ಸಾಗಾಟ ಮಾಡುತ್ತಿದ್ದಾರೆ ಎಂದು ಆರೋಪಿಸಿ ಯುವಕರು ಲಾರಿ ತಡೆದು, ಚಾಲಕನಿಗೆ ಥಳಿಸಿರುವ ಘಟನೆ ಬೆಳಗಾವಿಯ ಸುವರ್ಣ ವಿಧಾನಸೌಧದ ಬಳಿಯ ರಾಷ್ಟ್ರೀಯ‌ ಹೆದ್ದಾರಿಯಲ್ಲಿ ನಡೆದಿದೆ.

ಮಹಾರಾಷ್ಟ್ರದಿಂದ ಹುಬ್ಬಳ್ಳಿ ಕಡೆಗೆ ಹೊರಟಿದ್ದ ಲಾರಿಯಲ್ಲಿ 15 ರಿಂದ 20 ಗೋವುಗಳ ಸಾಗಾಟ ಮಾಡಲಾಗುತ್ತಿದೆ ಎಂಬ ಮಾಹಿತಿ ಮೇರೆಗೆ 30ಕ್ಕೂ ಹೆಚ್ಚು ಯುವಕರ ಗುಂಪು ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ತಡೆದಿತ್ತು. ಈ ವೇಳೆ ಲಾರಿ ಚಾಲಕ, ಸಿಬ್ಬಂದಿ ಮತ್ತು ಯುವಕರ ಮಧ್ಯೆ ವಾಗ್ವಾದ ಉಂಟಾಗಿದೆ. ಬಳಿಕ ಮಾತಿಗೆ ಮಾತು ಬೆಳೆದಾಗ ಲಾರಿ ಚಾಲಕ ಮತ್ತು ಕ್ಲೀನರ್ ಮೇಲೆ ಯುವಕರು ಹಲ್ಲೆ ಮಾಡಿದ್ದಾರೆ. ಜೊತೆಗೆ ಲಾರಿ ಮೇಲೆ ಕೂಡ ದಾಳಿ ಮಾಡಿದ್ದರಿಂದ ಲಾರಿ ಗಾಜು ಒಡೆದಿದೆ. ಇದರಿಂದಾಗಿ ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ಸಂಜೆ 7ರ ಸುಮಾರಿಗೆ ಗೊಂದಲ ವಾತಾವರಣ ನಿರ್ಮಾಣವಾಗಿತ್ತು. ಅಲ್ಲದೇ ಕೆಲ ಕಾಲ ಸಂಚಾರ ವ್ಯತ್ಯಯವೂ ಉಂಟಾಗಿತ್ತು. ಕೂಡಲೆ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಲಾರಿ ಚಾಲಕ ಮತ್ತು ಕ್ಲೀನರ್​ನನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

ಡಿಸಿಪಿ ರೋಹನ್ ಜಗದೀಶ್: ಇದೇ ವೇಳೆ ಮಾಧ್ಯಮಗಳ ಜೊತೆಗೆ ಮಾತನಾಡಿದ ಡಿಸಿಪಿ ರೋಹನ್ ಜಗದೀಶ್, ಸಂಜೆ 7 ಗಂಟೆಗೆ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಟ್ರಕ್​ನಲ್ಲಿ ಆಕಳು ಸಾಗಾಟ ಮಾಡುತ್ತಿದ್ದ ವಾಹನವನ್ನು ಯುವಕರ ಗುಂಪು ತಡೆದಿತ್ತು. ಆಗ ಡ್ರೈವರ್ ಹಾಗೂ ಸ್ಥಳೀಯ ಯುವಕರ ಮಧ್ಯೆ ವಾಗ್ವಾದ ನಡೆದಿದೆ. ಡ್ರೈವರ್ ಹಾಗೂ ಕ್ಲೀನರ್ ಮೇಲೆ ಯುವಕರು ಹಲ್ಲೆ ಮಾಡಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಪ್ರಕರಣದ ಕುರಿತು ತನಿಖೆ ಮಾಡುತ್ತಿದ್ದು, ಹೆಚ್ಚಿನ ವಿವರ ಪಡೆದು ನಂತರ ಮಾಹಿತಿ ನೀಡುತ್ತೇವೆ. ನಮಗಿರುವ ಪ್ರಾಥಮಿಕ ಮಾಹಿತಿ ಪ್ರಕಾರ 10 ರಿಂದ 12 ಆಕಳು ಲಾರಿಯಲ್ಲಿದ್ದವು ಎನ್ನಲಾಗಿದೆ. ಇನ್ನು ಪ್ರಕರಣ ಸಂಬಂಧ ನಾಲ್ವರು ಪೊಲೀಸ್ ಇನ್ಸ್​ಪೆಕ್ಟರ್​ ನೇತೃತ್ವದಲ್ಲಿ ತಂಡ ರಚಿಸಿ, ತಪ್ಪಿತಸ್ಥರು ಬಂಧನಕ್ಕೆ ಬಲೆ ಬೀಸಿದ್ದೇವೆ ಎಂದರು.

ಇದನ್ನೂ ಓದಿ: ರಾಯಚೂರು: ಮಗಳಿಗೆ ರಕ್ಷಣೆ ನೀಡಿದ ಪೋಷಕರು, ಸಂಬಂಧಿಕರ ಮೇಲೆ ಹಲ್ಲೆ - Attack On Parents

ಅಕ್ರಮವಾಗಿ ಗೋವು ಸಾಗಿಸುತ್ತಿದ್ದಾರೆ ಎಂದು ಯುವಕರು ಆರೋಪಿಸಿದ್ದಾರೆ. ಹಿರೇಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಜಗದೀಶ್ ಶೆಟ್ಟರ್ ಸ್ಥಳಕ್ಕೆ ಭೇಟಿ: ಬೆಳಗಾವಿ ಲೋಕಸಭೆ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಸ್ಥಳಕ್ಕೆ ದೌಡಾಯಿಸಿ ಯುವಕರ ಜೊತೆ ಮಾತುಕತೆ ನಡೆಸಿದರು‌. ಕಾನೂನು ಪ್ರಕಾರ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಮನವಿ ಮಾಡಿಕೊಂಡರು.

ಇದನ್ನೂ ಓದಿ: ಬೆಂಗಳೂರಲ್ಲಿ ಕಿಡಿಗೇಡಿಗಳಿಂದ ಹಲ್ಲೆ ಯತ್ನ: ನಟರಾದ ಹರ್ಷಿಕಾ‌ ಪೂಣಚ್ಚ ದಂಪತಿಯಿಂದ ದೂರು - actress harshika

Last Updated :Apr 22, 2024, 12:20 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.