ಪ್ರಕಟವಾಗದ ಕೆಪಿಎಸ್‌ಸಿ ಫಲಿತಾಂಶ: ಪರೇಡ್ ಮಧ್ಯೆ ಮೈದಾನಕ್ಕೆ ನುಗ್ಗಿ ವ್ಯಕ್ತಿಯ ಆಕ್ರೋಶ

By ETV Bharat Karnataka Team

Published : Jan 26, 2024, 2:16 PM IST

thumbnail

ಬೆಂಗಳೂರು: ಗಣರಾಜ್ಯೋತ್ಸವ ಹಿನ್ನೆಲೆಯಲ್ಲಿ ಇಂದು ನಗರದ ಮಾಣಿಕ್ ಶಾ ಪರೇಡ್ ಮೈದಾನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭದ್ರತಾ ಲೋಪವಾದ ಪ್ರಸಂಗವಾಗಿದೆ. ರಾಜ್ಯಪಾಲ ಥಾವರ್​ ಚಂದ್​ ಗೆಹ್ಲೋಟ್​, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಮತ್ತಿತರ ಗಣ್ಯರು ಉಪಸ್ಥಿತರಿದ್ದ ಕಾರ್ಯಕ್ರಮದಲ್ಲಿ ಬಿಗಿ ಭದ್ರತೆಯ ನಡುವೆಯೂ ವ್ಯಕ್ತಿಯೋರ್ವ ಪರೇಡ್​ ಮೈದಾನಕ್ಕೆ ನುಗ್ಗಿದ್ದಾರೆ.

ಮೈದಾನಕ್ಕೆ ನುಗ್ಗಿದ ವ್ಯಕ್ತಿ, ತನ್ನ ಪ್ಯಾಂಟ್​ ಜೇಬಿನಿಂದ ಭಿತ್ತಿ ಪತ್ರವನ್ನು ತೆಗೆದು ಮುಖ್ಯಮಂತ್ರಿಗಳ ಗ್ಯಾಲರಿಯತ್ತ ಎಸೆದಿದ್ದಾರೆ. ವ್ಯಕ್ತಿ ಮೈದಾನಕ್ಕೆ ನುಗ್ಗಿದ ತಕ್ಷಣ ಸ್ಥಳದಲ್ಲಿದ್ದ ಪೊಲೀಸ್​ ಸಿಬ್ಬಂದಿ ಸಿಎಂ ಗ್ಯಾಲರಿಯತ್ತ ಓಡುತ್ತಿದ್ದ ವ್ಯಕ್ತಿಯನ್ನು ವಶಕ್ಕೆ ಪಡೆದರು. ಆರೋಪಿಯನ್ನು ಪುರುಷೋತ್ತಮ್ ಎಂದು ಗುರುತಿಸಲಾಗಿದೆ.

ಪತ್ರಕರ್ತನ ಸೋಗಿನಲ್ಲಿ ಮಾಧ್ಯಮ ಸಿಬ್ಬಂದಿ ಗ್ಯಾಲರಿಗೆ ಬಂದಿದ್ದ ಆರೋಪಿಯು ಕಾರ್ಯಕ್ರಮದ ನಡುವೆ ಮೈದಾನಕ್ಕೆ ಜಿಗಿದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಯ ಅಳಿಯ ಕೆಪಿಎಸ್​ಸಿ ಪರೀಕ್ಷೆ ಬರೆದಿದ್ದು, ಇನ್ನೂ ಫಲಿತಾಂಶ ಪ್ರಕಟವಾಗದೇ ಇರುವ ಬೇಸರದಿಂದ ಹೀಗೆ ಮಾಡಿರುವುದಾಗಿ ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ.

ಇದನ್ನೂ ಓದಿ: ಕರ್ತವ್ಯ ಪಥದಲ್ಲಿ 'ಆವಾಹನ': 112 ಮಹಿಳೆಯರಿಂದ ಸಂಗೀತ ವಾದ್ಯಗಳ ಪರೇಡ್​- ವಿಡಿಯೋ

ABOUT THE AUTHOR

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.