ಆಕಸ್ಮಿಕ ಬೆಂಕಿ ತಗುಲಿ ಲಕ್ಷಾಂತರ ರೂ ಮೌಲ್ಯದ ಬೆಳೆಗಳು ಹಾನಿ: ವಿಡಿಯೋ - CROP BURN

🎬 Watch Now: Feature Video

thumbnail

By ETV Bharat Karnataka Team

Published : April 13, 2025 at 6:26 PM IST

1 Min Read

ಬೀದರ್: ಆಕಸ್ಮಿಕ ಬೆಂಕಿ ತಗುಲಿ ಲಕ್ಷಾಂತರ ರೂಪಾಯಿ ಮೌಲ್ಯದ ಬೆಳೆ ಹಾನಿಯಾದ ಘಟನೆ ಜಿಲ್ಲೆಯ ಭಾಲ್ಕಿ ಪಟ್ಟಣದ ಹೊರವಲಯದ ಭಾತಂಬ್ರಾ ರಸ್ತೆಯಲ್ಲಿರುವ ಹೊಲಗಳಲ್ಲಿ ನಡೆದಿದೆ.

ಪ್ರಶಾಂತ್ ಪಾಟೀಲ್ ಎಂಬವರಿಗೆ ಸೇರಿದ 6 ಎಕರೆ ಹೊಲದಲ್ಲಿ ಬೆಳೆದಿದ್ದ ಕಬ್ಬು, ಪಪ್ಪಾಯಿ, ಮಾವು ಹಾಗೂ ಭರತ್ ನಾಟೀಕರ್ ಎಂಬವರ ಹೊಲದಲ್ಲಿ ಸಂಗ್ರಹಿಸಿಟ್ಟಿದ್ದ 14 ಎಕರೆಯಲ್ಲಿ ಬೆಳೆದ ಜೋಳದ ತೆನೆಗಳು ಸುಟ್ಟು ಭಸ್ಮವಾಗಿವೆ.

ಸುಮಾರು 120 ಮಾವಿನ ಗಿಡಗಳಿಗೆ ಬೆಂಕಿ ತಗುಲಿ ಅಪಾರ ಪ್ರಮಾಣದ ಹಾನಿಯಾಗಿದ್ದು, ಈ ಹೊಲಗಳ ಅಕ್ಕಪಕ್ಕದ ಹೊಲಗಳಲ್ಲಿ ಬೆಳೆದ ಬೆಳೆಗಳಿಗೂ ಹಾನಿಯಾಗಿವೆ.

"ಟ್ರಾನ್ಸ್‌ಫಾರ್ಮರ್‌ನಲ್ಲಿ ವಿದ್ಯುತ್ ಪ್ರವಹಿಸಿ ಬೆಂಕಿ ತಗುಲಿರುವ ಶಂಕೆ ವ್ಯಕ್ತವಾಗಿದ್ದು, ಸತತ ಫೋನ್ ಸಂಪರ್ಕ ಮಾಡಿದ್ರೂ ಸಕಾಲಕ್ಕೆ ಸ್ಥಳಕ್ಕೆ ಬಾರಲಿಲ್ಲ" ಎಂದು ಅಗ್ನಿಶಾಮಕ ದಳದ ಸಿಬ್ಬಂದಿಯ ವಿರುದ್ಧ ರೈತರು ಕಿಡಿಕಾರಿದ್ದಾರೆ.

ನಂತರ ಸ್ಥಳಕ್ಕೆ ದೌಡಾಯಿಸಿ ಅಗ್ನಿಶಾಮಕ ದಳದ ಸಿಬ್ಬಂದಿ‌ ಬೆಂಕಿ‌ ನಂದಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಭಾಲ್ಕಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ತಡರಾತ್ರಿ ಅಗ್ನಿ ಅವಘಡ: ಕೂಲಿ ಕಾರ್ಮಿಕರು ವಾಸವಿದ್ದ ಶೆಡ್‌ಗಳು ಬೆಂಕಿಗಾಹುತಿ - FIRE ACCIDENT

ABOUT THE AUTHOR

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.