ಶಿವಮೊಗ್ಗ ಕ್ಷೇತ್ರದಲ್ಲಿ ಗೀತಾ ಶಿವರಾಜ್​ಕುಮಾರ್ ಚುನಾವಣಾ ರ‍್ಯಾಲಿ

By ETV Bharat Karnataka Team

Published : Mar 20, 2024, 7:55 PM IST

thumbnail

ಶಿವಮೊಗ್ಗ: ಲೋಕಸಮರಕ್ಕೆ ದಿನಾಂಕ ಘೋಷಣೆಯಾಗಿದ್ದು, ಅಭ್ಯರ್ಥಿಗಳು ಭರ್ಜರಿ ಪ್ರಚಾರಕ್ಕೆ ತಯಾರಿ ನಡೆಸುತ್ತಿದ್ದಾರೆ. ಈಗಾಗಲೇ ಹಲವೆಡೆ ಪ್ರಚಾರ ಪ್ರಾರಂಭವಾಗಿದೆ. ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಗೀತಾ ಶಿವರಾಜ್​ಕುಮಾರ್ ಕಣಕ್ಕಿಳಿದಿದ್ದು, ಅವರ ಬೆಂಬಲಕ್ಕೆ ಪತಿ, ನಟ ಶಿವರಾಜ್​ಕುಮಾರ್ ಆಗಮಿಸಿದ್ದಾರೆ.

ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್​ಕುಮಾರ್ ಹಾಗೂ ನಟ ಶಿವರಾಜ್​ಕುಮಾರ್ ದಂಪತಿ ಬೆಂಗಳೂರಿನಿಂದ ನೇರವಾಗಿ ಶಿವಮೊಗ್ಗದ ಭದ್ರಾವತಿಗೆ ಅಗಮಿಸಿದರು. ಭದ್ರಾವತಿಯ ಕಾರೆಹಳ್ಳಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ದಂಪತಿಯನ್ನು ಅದ್ಧೂರಿಯಾಗಿ ಸ್ವಾಗತಿಸಿದರು. ನಂತರ ಶಿವಮೊಗ್ಗ ನಗರಕ್ಕೆ ಆಗಮಿಸಿದ ದಂಪತಿಯನ್ನು ಕಾಂಗ್ರೆಸ್ ಮುಖಂಡರುಗಳು ಬೆಕ್ಕಿನ‌ಕಲ್ಮಠದ ಬಳಿ ಬರಮಾಡಿಕೊಂಡರು. ಈ ವೇಳೆ ಶಿವರಾಜ್​ಕುಮಾರ್ ದಂಪತಿ ಕಾರಿನಲ್ಲಿ ನಿಂತು ಅಭಿಮಾನಿಗಳ ಕಡೆ ಕೈಬೀಸಿದರು.  

ಕಾಂಗ್ರೆಸ್ ಮುಖಂಡರಾದ ಯೋಗೀಶ್ ಹಾಗೂ ಇತರರು ಮೂಸುಂಬಿ ಹಾರವನ್ನು ಮಾಡಿದ್ದರು.‌ ಹಾರದಲ್ಲಿ ತಮ್ಮ ಅಭ್ಯರ್ಥಿ ಗೀತಾ ಶಿವರಾಜ್​ಕುಮಾರ್ ಹಾಗೂ ಶಿವರಾಜ್​ಕುಮಾರ್ ಅವರ ಫೋಟೋವನ್ನು ಹಾಕಲಾಗಿತ್ತು. ಮುಖಂಡರ ಕೋರಿಕೆಯ ಮೇರೆಗೆ ದಂಪತಿ ಹಾರದ ಬಳಿ ಬಂದರು. ಈ ವೇಳೆ ಅಭಿಮಾನಿಗಳು ಹ್ಯಾಟ್ರಿಕ್​​ ಹೀರೋನನ್ನು ನೋಡಲು ಮುಗಿಬಿದ್ದಿದ್ದರು. ರ‍್ಯಾಲಿ ನಂತರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿದರು.

ಇದನ್ನೂ ಓದಿ: ಗೀತಾ ಶಿವರಾಜ್​​ಕುಮಾರ್​​ಗೆ ಸಿಕ್ತು ನಿರ್ಮಾಪಕರ ಬೆಂಬಲ​: ಗೀತಾಗೆ ಸಾಥ್ ಕೊಡುತ್ತೇವೆ ಎಂದ ನಿರ್ಮಾಪಕರು

ABOUT THE AUTHOR

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.