ಉಡುಪಿ: ನೀರಿನ ಟ್ಯಾಂಕ್‌ಗೆ ಬಿದ್ದ ಚಿರತೆ ರಕ್ಷಣೆ

By ETV Bharat Karnataka Team

Published : Jan 30, 2024, 7:59 AM IST

thumbnail

ಉಡುಪಿ: ಚಿರತೆ ಮರಿಯೊಂದು ಆಹಾರ ಹುಡುಕುತ್ತಾ ಬಂದು ನೀರಿನ ಟ್ಯಾಂಕ್​ಗೆ ಬಿದ್ದ ಘಟನೆ ಬೈಂದೂರು ತಾಲೂಕಿನ ತಗ್ಗರ್ಸೆ ಗ್ರಾಮದ ಚಂದಣ ಎಂಬಲ್ಲಿ ನಡೆದಿದೆ. ಚಿರತೆಯ ಆಗಮನದಿಂದ ಗ್ರಾಮಸ್ಥರು ಭಯಭೀತರಾಗಿದ್ದರು. ಮುಳ್ಳಿನ ಪೊದೆಯೊಂದರ ಸಮೀಪದ ನೀರಿನ ಟ್ಯಾಂಕ್​ಗೆ ಬಿದ್ದು ಹೊರಬರಲಾರದೆ ಚಿರತೆ ಚೀರಾಟ ಮಾಡುತ್ತಿತ್ತು. 

ಬೈಂದೂರು ತಾಲೂಕಿನ ವಕೀಲರ ಸಂಘದ ಅಧ್ಯಕ್ಷ ಮೋಬಿ ಪಿ.ಸಿ ಅವರು ಟ್ಯಾಂಕ್‌ನೊಳಗೆ ಚಿರತೆ ಸಿಕ್ಕಿ ಬಿದ್ದಿರುವುದನ್ನು ಗಮನಿಸಿದ್ದಾರೆ. ಟ್ಯಾಂಕ್​ ಆಳವಾದ್ದರಿಂದ ಜಿಗಿದು ಹೊರಬರಲು ಚಿರತೆಗೆ ಸಾಧ್ಯವಾಗಲಿಲ್ಲ. ಅದೃಷ್ಟವಶಾತ್​ ಟ್ಯಾಂಕ್​ ಒಳಗೆ ನೀರಿರಲಿಲ್ಲ. ತಕ್ಷಣ ಸ್ಥಳೀಯರನ್ನು ಕರೆದು ಮಾಹಿತಿ ನೀಡಿದ್ದಾರೆ. ಸ್ಥಳೀಯ ವಲಯ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ದೂರವಾಣಿ ಕರೆ ಮಾಡಿ ವಿಷಯ ಮುಟ್ಟಿಸಿದ್ದಾರೆ. 

ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಸಿಬ್ಬಂದಿಗಳೊಂದಿಗೆ ಭೇಟಿ ನೀಡಿ ನೀರಿನ ಟ್ಯಾಂಕ್​ನೊಳಗೆ ಸಿಲುಕಿದ್ದ ಚಿರತೆಯನ್ನು ಕಾರ್ಯಾಚರಣೆ ನಡೆಸಿ ಹೊರ ತೆಗೆದು ಸುರಕ್ಷಿತವಾಗಿ ದಟ್ಟ ಅರಣ್ಯಕ್ಕೆ ಬಿಟ್ಟಿದ್ದಾರೆ.

ಇದನ್ನೂ ಓದಿ : ಮೈಸೂರು: ಮಂಡಕಳ್ಳಿ ವಿಮಾನ ನಿಲ್ದಾಣದ ಬಳಿ ಕಾರು ಡಿಕ್ಕಿ ಹೊಡೆದು ಹುಲಿ ಸಾವು, ಪ್ರಕರಣ ದಾಖಲು

ABOUT THE AUTHOR

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.