LIVE: ದಳಪತಿಗಳ ಭದ್ರಕೋಟೆ ಮಂಡ್ಯದಲ್ಲಿ ರಾಹುಲ್​ ಗಾಂಧಿ ಮತಬೇಟೆ - Rahul Gandhi

By ETV Bharat Karnataka Team

Published : Apr 17, 2024, 3:10 PM IST

Updated : Apr 17, 2024, 3:25 PM IST

thumbnail
ಮಂಡ್ಯ: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಇಂದು ಕರ್ನಾಟಕಕ್ಕೆ ಆಗಮಿಸಿದ್ದಾರೆ. ಇದೇ ಮೊದಲ ಬಾರಿಗೆ ಕಾಂಗ್ರೆಸ್​ ಪರ ಪ್ರಚಾರಕ್ಕೆ ರಾಹುಲ್​ ರಾಜ್ಯಕ್ಕೆ ಆಗಮಿಸಿದ್ದಾರೆ. ಇಂದು ಮಧ್ಯಾಹ್ನ 12.30ಕ್ಕೆ ದೆಹಲಿಯಿಂದ ವಿಶೇಷ ವಿಮಾನದ ಮೂಲಕ ಮೈಸೂರಿನ ಮಂಡಕಳ್ಳಿ ಏರ್ಪೋಟ್​ಗೆ ಬಂದಿಳಿದ ಅವರು ಕೋಲಾರಕ್ಕೆ ಭೇಟಿ ನೀಡಿ ಇದೀಗ ಮಂಡ್ಯಕ್ಕೆ ಆಗಮಿಸಿದ್ದಾರೆ.ರೋಡ್‌ಶೋ ಮೂಲಕ ಮಂಡ್ಯ ವಿಶ್ವವಿದ್ಯಾಲಯ ಗ್ರೌಂಡ್‌‌ಗೆ ಆಗಮಿಸಿ ಸಮಾವೇಶದಲ್ಲಿ ರಾಹುಲ್‌ ಗಾಂಧಿ ಭಾಗಿಯಾಗಿ ಭಾಷಣ ಮಾಡುತ್ತಿದ್ದಾರೆ. ಕೇರಳದ ವಯನಾಡ್​ನಿಂದ ಲೋಕಸಭೆ ಚುನಾವಣೆಗೆ ಎರಡನೇ ಬಾರಿಗೆ ಸ್ಪರ್ಧೆ ಮಾಡುತ್ತಿರುವ ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಅವರು ಮಂಗಳವಾರ ಕ್ಷೇತ್ರದಲ್ಲಿ ಭರ್ಜರಿ ಪ್ರಚಾರ ನಡೆಸಿದ್ದರು. ಕ್ಷೇತ್ರದ ಹಲವೆಡೆ ರೋಡ್​ ಶೋ ನಡೆಸಿದ ಕೈ ನಾಯಕ ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದರು. ಭಾರತದ ಸಂವಿಧಾನವನ್ನು ನಾಶಪಡಿಸಲು ಮತ್ತು ಬದಲಾಯಿಸಲು ಆರ್‌ಎಸ್‌ಎಸ್ ಮತ್ತು ಬಿಜೆಪಿ ಪ್ರಯತ್ನಿಸುತ್ತಿವೆ. ಕಾಂಗ್ರೆಸ್ ಪಕ್ಷ ಮತ್ತು I.N.D.I.A ಒಕ್ಕೂಟ ಸಂವಿಧಾನ ಉಳಿಸಲು ಪ್ರಯತ್ನಿಸುತ್ತಿದೆ ಎಂದು ವಾಗ್ದಾಳಿ ರಾಹುಲ್​ ಗಾಂಧಿ ನಡೆಸಿದ್ದರು.
Last Updated : Apr 17, 2024, 3:25 PM IST

ABOUT THE AUTHOR

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.