LIVE: ದಳಪತಿಗಳ ಭದ್ರಕೋಟೆ ಮಂಡ್ಯದಲ್ಲಿ ರಾಹುಲ್ ಗಾಂಧಿ ಮತಬೇಟೆ - Rahul Gandhi
![ETV Bharat Karnataka Team](https://etvbharatimages.akamaized.net/etvbharat/prod-images/authors/karnataka-1716535795.jpeg?imwidth=128)
Published : Apr 17, 2024, 3:10 PM IST
|Updated : Apr 17, 2024, 3:25 PM IST
![ETV Thumbnail thumbnail](https://etvbharatimages.akamaized.net/etvbharat/prod-images/17-04-2024/640-480-21246569-thumbnail-16x9-vny.jpg)
ಮಂಡ್ಯ: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಂದು ಕರ್ನಾಟಕಕ್ಕೆ ಆಗಮಿಸಿದ್ದಾರೆ. ಇದೇ ಮೊದಲ ಬಾರಿಗೆ ಕಾಂಗ್ರೆಸ್ ಪರ ಪ್ರಚಾರಕ್ಕೆ ರಾಹುಲ್ ರಾಜ್ಯಕ್ಕೆ ಆಗಮಿಸಿದ್ದಾರೆ. ಇಂದು ಮಧ್ಯಾಹ್ನ 12.30ಕ್ಕೆ ದೆಹಲಿಯಿಂದ ವಿಶೇಷ ವಿಮಾನದ ಮೂಲಕ ಮೈಸೂರಿನ ಮಂಡಕಳ್ಳಿ ಏರ್ಪೋಟ್ಗೆ ಬಂದಿಳಿದ ಅವರು ಕೋಲಾರಕ್ಕೆ ಭೇಟಿ ನೀಡಿ ಇದೀಗ ಮಂಡ್ಯಕ್ಕೆ ಆಗಮಿಸಿದ್ದಾರೆ.ರೋಡ್ಶೋ ಮೂಲಕ ಮಂಡ್ಯ ವಿಶ್ವವಿದ್ಯಾಲಯ ಗ್ರೌಂಡ್ಗೆ ಆಗಮಿಸಿ ಸಮಾವೇಶದಲ್ಲಿ ರಾಹುಲ್ ಗಾಂಧಿ ಭಾಗಿಯಾಗಿ ಭಾಷಣ ಮಾಡುತ್ತಿದ್ದಾರೆ. ಕೇರಳದ ವಯನಾಡ್ನಿಂದ ಲೋಕಸಭೆ ಚುನಾವಣೆಗೆ ಎರಡನೇ ಬಾರಿಗೆ ಸ್ಪರ್ಧೆ ಮಾಡುತ್ತಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಮಂಗಳವಾರ ಕ್ಷೇತ್ರದಲ್ಲಿ ಭರ್ಜರಿ ಪ್ರಚಾರ ನಡೆಸಿದ್ದರು. ಕ್ಷೇತ್ರದ ಹಲವೆಡೆ ರೋಡ್ ಶೋ ನಡೆಸಿದ ಕೈ ನಾಯಕ ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದರು. ಭಾರತದ ಸಂವಿಧಾನವನ್ನು ನಾಶಪಡಿಸಲು ಮತ್ತು ಬದಲಾಯಿಸಲು ಆರ್ಎಸ್ಎಸ್ ಮತ್ತು ಬಿಜೆಪಿ ಪ್ರಯತ್ನಿಸುತ್ತಿವೆ. ಕಾಂಗ್ರೆಸ್ ಪಕ್ಷ ಮತ್ತು I.N.D.I.A ಒಕ್ಕೂಟ ಸಂವಿಧಾನ ಉಳಿಸಲು ಪ್ರಯತ್ನಿಸುತ್ತಿದೆ ಎಂದು ವಾಗ್ದಾಳಿ ರಾಹುಲ್ ಗಾಂಧಿ ನಡೆಸಿದ್ದರು.
Last Updated : Apr 17, 2024, 3:25 PM IST