ಬೀದರ್​: ಕೆಮಿಕಲ್ ಗ್ಯಾಸ್ ಸೋರಿಕೆಯಿಂದ ಇಬ್ಬರು ಯುವಕರು ಸಾವು

By ETV Bharat Karnataka Team

Published : Jan 22, 2024, 12:29 PM IST

thumbnail

ಬೀದರ್: ರಾಸಾಯನಿಕ ಕಾರ್ಖಾನೆಯೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದ ವೇಳೆ ಕೆಮಿಕಲ್​ ಗ್ಯಾಸ್​ ಸೋರಿಕೆಯಿಂದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ. ಬೀದರ್​ ಜಿಲ್ಲೆಯ ಹುಮನಾಬಾದ್​ ಪಟ್ಟಣದ ಹೊರವಲಯದ ಕೈಗಾರಿಕಾ ಪ್ರದೇಶದಲ್ಲಿ ಭಾನುವಾರ ತಡರಾತ್ರಿ ಈ ದುರ್ಘಟನೆ ಸಂಭವಿಸಿದೆ.

ಶ್ರೀ ಪ್ರಸನ್ನ ಪ್ರೀ ಪೋಸೆಸಿಂಗ್ ಲಿಮಿಟೆಡ್ ಕಂಪನಿಯಲ್ಲಿ ಅವಘಡ ಸಂಭವಿಸಿದ್ದು, ಮೃತಪಟ್ಟವರನ್ನು ಬೀದರ್​ ತಾಲೂಕಿನ ವಡ್ಡನಕೇರಾ ಗ್ರಾಮದ ಮಹಮ್ಮದ್​ ಶಾಬಾದ್​ (21) ಹಾಗೂ ಮಧ್ಯ ಪ್ರದೇಶ ಮೂಲದ ಇಂದ್ರಜಿತ್ (23)​ ಎಂದು ಗುರುತಿಸಲಾಗಿದೆ. ಕಾರ್ಖಾನೆಯೊಳಗೆ ಕೆಲಸ ನಡೆಯುತ್ತಿದ್ದ ವೇಳೆ ದುರಂತ ನಡೆದಿದೆ. ಮೃತದೇಹಗಳನ್ನು ಹತ್ತಿರದ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ.

ಘಟನೆ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ನೂರಾರು ಜನರು ಆಸ್ಪತ್ರೆ ಬಳಿ ಜಮಾಯಿಸಿದ್ದರು. ಈ ವೇಳೆ ಪೊಲೀಸರ ಮಧ್ಯಪ್ರವೇಶದಿಂದ ಪರಿಸ್ಥಿತಿ ತಿಳಿಗೊಂಡಿದೆ. ಘಟನೆ ನಡೆದ ಸ್ಥಳಕ್ಕೆ ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ, ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಚನ್ನಬಸವಣ್ಣ ಎಸ್​. ಎಲ್​, ಶಾಸಕ ಸಿದ್ದು ಪಾಟೀಲ್​ ಭೇಟಿ ನೀಡಿ ಪರಿಶೀಲಿಸಿದರು. 

ಇದನ್ನೂ ನೋಡಿ: ಶಾರ್ಟ್ ಸರ್ಕ್ಯೂಟ್​ನಿಂದ ಮನೆಗೆ ಬೆಂಕಿ: 5 ಲಕ್ಷ ನಗದು ಸೇರಿ ಲಕ್ಷಾಂತರ ಮೌಲ್ಯದ ವಸ್ತು ಬೆಂಕಿಗಾಹುತಿ

ABOUT THE AUTHOR

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.