ಚಿಕ್ಕಮಗಳೂರಿನಲ್ಲಿ ಮುಂದುವರಿದ ಕಾಡಾನೆ ಕಾಟ: ಒಂಟಿ ಸಲಗದ ವಿಡಿಯೋ

By ETV Bharat Karnataka Team

Published : Feb 23, 2024, 8:56 AM IST

Updated : Feb 23, 2024, 12:29 PM IST

thumbnail

ಚಿಕ್ಕಮಗಳೂರು: ಮಲೆನಾಡು ಭಾಗದಲ್ಲಿ ದಿನದಿಂದ ದಿನಕ್ಕೆ ಕಾಡಾನೆಗಳ ಹಾವಳಿ ಹೆಚ್ಚುತ್ತಿದೆ. ಆಲ್ದೂರು ಸಮೀಪದ ಅಣೂರಿನಲ್ಲಿ ಒಂಟಿ ಸಲಗ ಬೀಡು ಬಿಟ್ಟು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಪದೇ ಪದೆ ಈ ಭಾಗದಲ್ಲಿ ಕಾಡಾನೆಗಳು ಕಾಣಿಸಿಕೊಳ್ಳುತ್ತಿರುವುದರಿಂದ ಕಾಫಿ ತೋಟಕ್ಕೆ ಹೋಗಲು ಕಾರ್ಮಿಕರು ಹಿಂದೇಟು ಹಾಕುತ್ತಿದ್ದಾರೆ.  

ಕಾಡಾನೆ ಹಾವಳಿ ಹಿನ್ನೆಲೆ ಸ್ಥಳೀಯರಲ್ಲಿ ಆತಂಕ ಮನೆ ಮಾಡಿದೆ. ಭಯದ ವಾತಾವರಣ ಸೃಷ್ಟಿಯಾಗಿದೆ. ಮನೆಯಿಂದ ಹೊರಬರಲು ಭಯಪಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಕಳೆದ ರಾತ್ರಿಯಿಂದಲೇ ಅಣೂರಿನ ತೋಟದ ಸುತ್ತ-ಮುತ್ತ ಕಾಡಾನೆ‌ ಕಾಣಿಸಿಕೊಳ್ಳುತ್ತಿದೆ. ಬೀಟಮ್ಮ ಅಂಡ್ ಗ್ಯಾಂಗ್ ಹಾವಳಿಯ ನಂತರ ಒಂಟಿ ಸಲಗದ ಕಾಟ ಪ್ರಾರಂಭವಾಗಿದೆ.  

ಈಗಾಗಲೇ ಜಿಲ್ಲೆಯ ಎಲ್ಲಾ ಭಾಗಗಳಲ್ಲಿಯೂ ಕಾಫಿ ಕಟಾವು ಪ್ರಾರಂಭವಾಗಿದೆ. ಆದರೆ ಕಾಫಿ ತೋಟಕ್ಕೆ ಹೋಗಲು ಕಾರ್ಮಿಕರು ಭಯಪಡುತ್ತಿದ್ದಾರೆ. ಹಲವು ಬಾರಿ ಗ್ರಾಮಸ್ಥರು ಅರಣ್ಯ ಇಲಾಖೆ ಸಿಬ್ಬಂದಿಗೆ ಮನವಿ ಮಾಡಿದ್ದರೂ, ಯಾವುದೇ ರೀತಿಯ ಪ್ರಯೋಜನವಾಗಿಲ್ಲ. ಇತ್ತ ಕಾಡಾನೆಗಳನ್ನು ಬೇರೆಡೆ ಸ್ಥಳಾಂತರ ಮಾಡುವ ಕೆಲಸಕ್ಕೂ ಅರಣ್ಯ ಇಲಾಖೆ ಕೈ ಹಾಕುತ್ತಿಲ್ಲ ಎಂಬ ಆರೋಪವಿದೆ. ಕಾಡಾನೆ ಸಮಸ್ಯೆ ಬಗ್ಗೆ ಕಾಫಿ ಬೆಳೆಗಾರರು ಹಾಗೂ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಇದನ್ನೂ ಓದಿ: ಕೇಂದ್ರದ ವಿರುದ್ಧದ ನಿರ್ಣಯ ಖಂಡನೀಯ: ಬಸವರಾಜ ಬೊಮ್ಮಾಯಿ

Last Updated : Feb 23, 2024, 12:29 PM IST

ABOUT THE AUTHOR

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.