ಶಿವಮೊಗ್ಗ: ವಿಜಯೇಂದ್ರ, ರಾಘವೇಂದ್ರರ ಮನೆಗಳಿಗೆ ಯೂತ್ ಕಾಂಗ್ರೆಸ್‌ ಮುತ್ತಿಗೆ ಯತ್ನ

By ETV Bharat Karnataka Team

Published : Feb 7, 2024, 4:58 PM IST

thumbnail

ಶಿವಮೊಗ್ಗ: ದೆಹಲಿಯ ಜಂತರ್ ಮಂತರ್​ನಲ್ಲಿ ಕೇಂದ್ರ ಸರ್ಕಾರದ ವಿರುದ್ದ ರಾಜ್ಯ ಸರ್ಕಾರ ಪ್ರತಿಭಟನೆ ನಡೆಸುತ್ತಿರುವ ಮಧ್ಯೆ ಶಿವಮೊಗ್ಗದಲ್ಲಿ ಇಂದು ಯುವ ಕಾಂಗ್ರೆಸ್ ಹಾಗೂ ಎನ್​ಎಸ್​ಯುಐ ಕಾರ್ಯಕರ್ತರು ಪ್ರತ್ಯೇಕವಾಗಿ ಪ್ರತಿಭಟನೆ ನಡೆಸಿ ಸಂಸದ ಬಿ.ವೈ.ರಾಘವೇಂದ್ರ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದರು. ಈ ಸಂಬಂಧ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದರು.

ಮೊದಲಿಗೆ ವಿನೋಬನಗರದ ಪೊಲೀಸ್ ಚೌಕಿಯಲ್ಲಿ ಪ್ರತಿಭಟನೆ ನಡೆಸಿದ ಕಾರ್ಯಕರ್ತರು ನಂತರ ರಾಘವೇಂದ್ರ ಮನೆಗೆ ಮುತ್ತಿಗೆ ಹಾಕಲು ತೆರಳಿದರು. ಈ ವೇಳೆ ಪೊಲೀಸರು ಬ್ಯಾರಿಕೇಡ್​ ಹಾಕಿ ರಸ್ತೆ ತಡೆದರು. ಬ್ಯಾರಿಕೇಡ್​ ತೆರೆಯಲು ಮುಂದಾದ ಕಾರ್ಯಕರ್ತರನ್ನು ವಶಕ್ಕೆ ಪಡೆಯಲಾಯಿತು. 

ಮತ್ತೊಂದೆಡೆ, ಬಿ.ವೈ.ವಿಜಯೇಂದ್ರ ಮನೆಗೆ ಎನ್​ಎಸ್​ಯುಐ ಕಾರ್ಯಕರ್ತರು ಮುತ್ತಿಗೆ ಹಾಕಲು ಯತ್ನಿಸಿದರು. ಬೈಪಾಸ್ ರಸ್ತೆಯಲ್ಲಿ ಕೇಂದ್ರದ ವಿರುದ್ದ ಪ್ರತಿಭಟನೆ ನಡೆಸಿ, ನಂತರ ವಿಜಯೇಂದ್ರರ ಮನೆ ಮುತ್ತಿಗೆಗೆ ಮುಂದಾಗಿದ್ದಾರೆ. ಬ್ಯಾರಿಕೇಡ್​ ತೆರವುಗೊಳಿಸಿ ಮುನ್ನುಗ್ಗಲು ಯತ್ನಿಸಿದ್ದು, ಪೊಲೀಸರು ಪ್ರತಿಭಟನಕಾರರನ್ನು ವಶಕ್ಕೆ ಪಡೆದರು.    

ಇದನ್ನೂ ಓದಿ: 'ಇದು ರಾಜಕೀಯ ಚಳವಳಿ ಅಲ್ಲ, ಕರ್ನಾಟಕದ ಹಾಗೂ ಕನ್ನಡಿಗರ ಹಿತ ಕಾಯುವ ಚಳವಳಿ' : ಸಿಎಂ ಸಿದ್ದರಾಮಯ್ಯ

ABOUT THE AUTHOR

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.