ಭೀಕರ ಬಸ್ ಅಪಘಾತ- 14 ಜನರ ಸಾವು: 50ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರ ಗಾಯ
ಕಂದಕಕ್ಕೆ ಉರುಳಿದ ಖಾಸಗಿ ಬಸ್ನಲ್ಲಿ ಹೆಚ್ಚಿನ ಪ್ರಯಾಣಿಕರಿದ್ದರು, ಇದರಲ್ಲಿ 14 ಜನರು ಮೃತಪಟ್ಟಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.


Published : January 9, 2026 at 8:00 PM IST
|Updated : January 9, 2026 at 10:37 PM IST
ಸಿರ್ಮೌರ್, ಹಿಮಾಚಲ ಪ್ರದೇಶ: ಸಿರ್ಮೌರ್ ಜಿಲ್ಲೆಯಲ್ಲಿ ಶುಕ್ರವಾರ ಮಧ್ಯಾಹ್ನ 3:30 ರ ಸುಮಾರಿಗೆ ಶ್ರೀ ರೇಣುಕಾಜಿ ಕ್ಷೇತ್ರದ ಹರಿಪುರ್ಧರ್ ಬಳಿ ಖಾಸಗಿ ಬಸ್ ಆಳವಾದ ಕಂದಕಕ್ಕೆ ಉರುಳಿ ಬಿದ್ದಿದೆ. ಅಪಘಾತದಲ್ಲಿ ಇದುವರೆಗೆ ಹನ್ನೆರಡು ಜನರು ಸಾವನ್ನಪ್ಪಿದ್ದಾರೆ. ಮೃತರ ಗುರುತು ಪತ್ತೆ ಕಾರ್ಯ ಮುಂದುವರೆದಿದ್ದು ಹಲವು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಕಂದಕಕ್ಕೆ ಉರುಳಿದ ಬಸ್: ವರದಿಗಳ ಪ್ರಕಾರ ಖಾಸಗಿ ಬಸ್ (ಜೀಟ್ ಕೋಚ್) ಸಿರ್ಮೌರ್ ಜಿಲ್ಲೆಯಲ್ಲಿ ನಿಯಂತ್ರಣ ಕಳೆದುಕೊಂಡು ಆಳವಾದ ಕಂದಕಕ್ಕೆ ಬಿದ್ದಿದೆ. ಬಸ್ ಶಿಮ್ಲಾದಿಂದ ಕುಪ್ವಿಗೆ ತೆರಳುತ್ತಿತ್ತು. ಹರಿಪುರ್ಧರ್ಗೆ ಕೇವಲ 100 ಮೀಟರ್ ಮೊದಲು ಚಾಲಕ ಇದ್ದಕ್ಕಿದ್ದಂತೆ ನಿಯಂತ್ರಣ ಕಳೆದುಕೊಂಡು ಬಸ್ 100 ಮೀಟರ್ ಆಳದ ಕಂದಕಕ್ಕೆ ಉರುಳಿತು. ಅಪಘಾತದ ಸಮಯದಲ್ಲಿ 60ಕ್ಕೂ ಹೆಚ್ಚು ಜನರು ಬಸ್ನಲ್ಲಿದ್ದರು. ಅವರಲ್ಲಿ 14 ಜನರು ಸ್ಥಳದಲ್ಲೇ ಸಾವನ್ನಪ್ಪಿದರೆ ಮತ್ತು ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಎಲ್ಲ ಗಾಯಾಳುಗಳನ್ನು ಚಿಕಿತ್ಸೆಗಾಗಿ ಐಜಿಎಂಸಿ ಶಿಮ್ಲಾಕ್ಕೆ ಉಲ್ಲೇಖಿಸಲಾಗಿದೆ.

ಅಪಘಾತದಲ್ಲಿ 14 ಜನರ ಸಾವು: ಬಸ್ ಅಪಘಾತದಲ್ಲಿ ಅನೇಕ ಜನರು ಸಾವನ್ನಪ್ಪಿದ್ದಾರೆ. ಸಂಗ್ರಾ, ರಾಜ್ಗಢ ಮತ್ತು ದಾದಾಹುಗಳಿಂದ ಪೊಲೀಸರು ಮತ್ತು ಪರಿಹಾರ ತಂಡಗಳನ್ನು ಸ್ಥಳಕ್ಕೆ ರವಾನಿಸಲಾಗಿದೆ. ಘಟನಾ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆಗಳು ಯುದ್ಧೋಪಾದಿಯಲ್ಲಿ ನಡೆಯುತ್ತಿವೆ ಎಂದು ಸಿರ್ಮೌರ್ ಎಸ್ಪಿ ಎನ್.ಎಸ್. ನೇಗಿ ಹೇಳಿದ್ದಾರೆ.
ಸಂತಾಪ ಸೂಚಿಸಿದ ಮುಖ್ಯಮಂತ್ರಿ: ಸಿರ್ಮೌರ್ನ ಹರಿಪುರ್ಧರ್ ಬಳಿ ನಡೆದ ಬಸ್ ಅಪಘಾತದಲ್ಲಿ ಸಾವನ್ನಪ್ಪಿದವರಿಗೆ ಮುಖ್ಯಮಂತ್ರಿ ಸುಖ್ವಿಂದರ್ ಸಿಂಗ್ ಸುಖು ತೀವ್ರ ಸಂತಾಪ ಸೂಚಿಸಿದ್ದಾರೆ. ಅಗಲಿದ ಆತ್ಮಗಳಿಗೆ ಶಾಂತಿ ಸಿಗಲಿ ಮತ್ತು ಈ ಸರಿಪಡಿಸಲಾಗದ ನಷ್ಟವನ್ನು ಸಹಿಸಿಕೊಳ್ಳುವ ಶಕ್ತಿಯನ್ನು ಮೃತ ಕುಟುಂಬಗಳಿಗೆ ನೀಡಲಿ ಎಂದು ಸಿಎಂ ಪ್ರಾರ್ಥಿಸಿದ್ದಾರೆ. ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಅವರು ಹಾರೈಸಿದ್ದಾರೆ. ಮೃತರ ಕುಟುಂಬಗಳಿಗೆ ಸಾಧ್ಯ ಇರುವ ಎಲ್ಲ ಸಹಾಯವನ್ನು ಒದಗಿಸುವಂತೆ ಮತ್ತು ಗಾಯಾಳುಗಳಿಗೆ ಅತ್ಯುತ್ತಮ ವೈದ್ಯಕೀಯ ಆರೈಕೆ ಖಚಿತಪಡಿಸಿಕೊಳ್ಳುವಂತೆ ಮುಖ್ಯಮಂತ್ರಿ ಜಿಲ್ಲಾಡಳಿತಕ್ಕೆ ನಿರ್ದೇಶನ ಕೂಡಾ ನೀಡಿದ್ದಾರೆ.

ಗಾಯಾಳುಗಳು ಆಸ್ಪತ್ರೆಗೆ ರವಾನೆ: ಅಪಘಾತದ ನಂತರ ಸ್ಥಳದಲ್ಲಿ ಅವ್ಯವಸ್ಥೆ ಭುಗಿಲೆದ್ದಿತ್ತು. ಸ್ಥಳೀಯ ನಿವಾಸಿಗಳು ಪೊಲೀಸರು ಮತ್ತು ಆಡಳಿತಕ್ಕೆ ಅಪಘಾತದ ಮಾಹಿತಿ ನೀಡಿದರು. ನಂತರ ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಗಳು ಪ್ರಾರಂಭವಾದವು. ಪ್ರಥಮ ಚಿಕಿತ್ಸೆಯ ನಂತರ ಗಾಯಾಳುಗಳನ್ನು ಶಿಮ್ಲಾ ಐಜಿಎಂಸಿಗೆ ರವಾನಿಸಲಾಯಿತು.
ಸಂತಾಪ ಸೂಚಿಸಿದ ಜೆಪಿ ನಡ್ಡಾ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ ಅವರು ಹರಿಪುರ್ಧರ್ ಬಸ್ ಅಪಘಾತದ ಬಗ್ಗೆ ಸಂತಾಪ ಸೂಚಿಸಿದ್ದಾರೆ. "ಈ ಕಷ್ಟದ ಸಮಯದಲ್ಲಿ ಬಿಜೆಪಿ ಸಂತ್ರಸ್ತ ಕುಟುಂಬಗಳೊಂದಿಗೆ ಸಂಪೂರ್ಣ ಸಂವೇದನೆಯೊಂದಿಗೆ ನಿಲ್ಲುತ್ತದೆ. ಅಗಲಿದ ಆತ್ಮಗಳಿಗೆ ಶಾಂತಿ ಸಿಗಲಿ ಮತ್ತು ಗಾಯಾಳುಗಳಿಗೆ ಶೀಘ್ರ ಚೇತರಿಕೆ ಸಿಗಲಿ ಎಂದು ನಾವು ದೇವರಲ್ಲಿ ಪ್ರಾರ್ಥಿಸುತ್ತೇವೆ ಎಂದು ಹೇಳಿದ್ದಾರೆ.

ಇವುಗಳನ್ನು ಓದಿ: ಪಶ್ಚಿಮ ಬಂಗಾಳ ರಾಜ್ಯಪಾಲರಿಗೆ ಕೊಲೆ ಬೆದರಿಕೆ ಹಾಕಿದ ಆರೋಪಿ ಬಂಧನ; ಭದ್ರತೆ ಹೆಚ್ಚಳ
ಸಾಗರದ ಮಂಗಳಗಿರಿಯಲ್ಲಿ ನಿರ್ಮಾಣವಾಗಲಿದೆ ದೇಶದ ಎರಡನೇ ವಿಶಿಷ್ಟ ಜೈನ ದೇವಾಲಯ; ಇದರ ವಿಶೇಷತೆ ಏನು ಗೊತ್ತಾ?

