ಶಿವಮೊಗ್ಗ: ಕೃಷಿ ಹೊಂಡದಲ್ಲಿ ಬಿದ್ದು ಚನ್ನಹಳ್ಳಿ ಗ್ರಾಮದ ಮಾಲತೇಶ್ (30) ಹಾಗೂ ಅಭಯ್ ಎಂಬವರು ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ತಾಲೂಕು ಆಯನೂರು ಸಮೀಪದ ಚನ್ನಹಳ್ಳಿಯಲ್ಲಿ ಇಂದು ನಡೆದಿದೆ.
ಚನ್ನಹಳ್ಳಿ ಗ್ರಾಮದ ಅಶೋಕ್ ಎಂಬುವರ ಜಮೀನಲ್ಲಿ ಮಾಲತೇಶ್ ಟ್ರ್ಯಾಕ್ಟರಿ ಓಡಿಸಲು ಹೋಗಿದ್ದರು. ಈ ವೇಳೆ ಆಶೋಕ್ ಅವರ ಸೋದರಳಿಯ ಅಭಯ್ ನೀರು ಕುಡಿಯಲು ಹೋಗಿ ಕೃಷಿ ಹೊಂಡದಲ್ಲಿ ಬಿದ್ದು ಒದ್ದಾಡುತ್ತಿದ್ದ. ಅಲ್ಲೇ ಪಕ್ಕದಲ್ಲಿಯೇ ಟ್ರ್ಯಾಕ್ಟರ್ ಓಡಿಸುತ್ತಿದ್ದ ಮಾಲತೇಶ್, ಅಭಯ್ನನ್ನು ರಕ್ಷಿಸಲು ಹೋಗಿ ತಾನು ಸಹ ಕೃಷಿ ಹೊಂಡದಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.
ಟ್ರ್ಯಾಕ್ಟರ್ ಸೌಂಡ್ ಬಾರದೆ ಇರುವ ಹಿನ್ನೆಲೆಯಲ್ಲಿ ನೋಡಲು ಹೋದಾಗ ಘಟನೆ ಬೆಳಕಿಗೆ ಬಂದಿದೆ. ಮೃತ ಮಾಲತೇಶ್ನಿಗೆ ಮದುವೆಯಾಗಿ ಒಂದು ವರ್ಷವಾಗಿತ್ತು. ಇವರ ಪತ್ನಿ 5 ತಿಂಗಳ ಗರ್ಭಿಣಿಯಾಗಿದ್ದಾರೆ. ಮೃತರ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿತ್ತು. ಈ ಕುರಿತು ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ವಿಜಯಪುರ: ಕೃಷಿ ಹೊಂಡಕ್ಕೆ ಬಿದ್ದು ಇಬ್ಬರು ಬಾಲಕರು ಸಾವು