ಧಾರವಾಡ: ರಸ್ತೆಯಲ್ಲಿ ನಿಂತುಕೊಂಡು ದರೋಡೆ ಮಾಡುತ್ತಿದ್ದ ಖದೀಮರನ್ನು ಧಾರವಾಡ ಗ್ರಾಮೀಣ ಪೊಲೀಸರು ಚೇಸಿಂಗ್ ಮಾಡಿ ಹಿಡಿದಿದ್ದಾರೆ.
ಧಾರವಾಡ ತಾಲೂಕಿನ ಮಂಡಿಹಾಳ ಗ್ರಾಮದ ಬಳಿ ಹೋಗುತ್ತಿದ್ದ ವ್ಯಕ್ತಿಯೊಬ್ಬನನ್ನು ತಡೆದ ಖದೀಮರು ಅವರಲ್ಲಿ ಹಣ ಹಾಗೂ ಮೊಬೈಲ್ ದರೋಡೆ ಮಾಡಿ ಅಲ್ಲಿಂದ ಎಸ್ಕೇಪ್ ಆಗಿದ್ದರು. ಕೂಡಲೇ ಆ ವ್ಯಕ್ತಿ ಧಾರವಾಡ ಗ್ರಾಮೀಣ ಪಿಎಸ್ಐ ರೇಣುಕಾ ಐರಾಣಿ ಅವರಿಗೆ ಕರೆ ಮಾಡಿ ಘಟನೆ ಕುರಿತು ತಿಳಿಸಿದ್ದಾರೆ.
ಕೂಡಲೇ ಕಾರ್ಯಪ್ರವೃತ್ತರಾದ ರೇಣುಕಾ ಘಟನಾ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಬಳಿಕ ದರೋಡೆಕೋರರು ಹೋಗಿದ್ದ ರಸ್ತೆಯನ್ನು ಅನುಸರಿಸಿ ಸಿನಿಮಿಯ ರೀತಿಯಲ್ಲಿ ಚೇಸ್ ಮಾಡಿದ ಲೇಡಿ ಸಿಂಗಮ್ ಇಬ್ಬರನ್ನು ಸೆರೆ ಹಿಡಿದಿದ್ದಾರೆ. ಪಿಎಸ್ಐ ರೇಣುಕಾ ಅವರ ಕಾರ್ಯವೈಖರಿಯನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ಲಾಘಿಸಿ ಬಹುಮಾನವನ್ನು ನೀಡಿ ಗೌರವಿಸಿದ್ದಾರೆ.
ಇದನ್ನೂ ಓದಿ: ಕ್ಯಾಂಟರ್ ಅಡ್ಡಗಟ್ಟಿ ₹32 ಲಕ್ಷ ದರೋಡೆ ಪ್ರಕರಣ: ಐವರ ಬಂಧನ, ₹31 ಲಕ್ಷ ರಿಕವರಿ - robbery case