ETV Bharat / sports

ದುಬೈ ನಿಂದ ಭಾರತಕ್ಕೆ ವಾಪಾಸ್​ ಆದ ಟೆನ್ನಿಸ್​ ತಾರೆ ಪಿವಿ ಸಿಂಧು!!

ದುಬೈನಲ್ಲಿ ಸಿಲುಕಿಕೊಂಡಿದ್ದ ಭಾರತದ ಟೆನ್ನಿಸ್​ ತಾರೆ ಪಿವಿ ಸಿಂಧು ಭಾರತಕ್ಕೆ ವಾಪಾಸ್​ ಆಗಿದ್ದಾರೆ.

ಪಿವಿ ಸಿಂಧು
ಪಿವಿ ಸಿಂಧು (IANS)
author img

By ETV Bharat Sports Team

Published : March 3, 2026 at 1:49 PM IST

1 Min Read
Choose ETV Bharat

ಪಶ್ಚಿಮ ಏಷ್ಯಾದ ಉದ್ವಿಗ್ನತೆಯ ನಡುವೆ ದುಬೈನಲ್ಲಿ ಸಿಲುಕಿಕೊಂಡಿದ್ದ ಭಾರತದ ಸ್ಟಾರ್ ಶಟ್ಲರ್ ಪಿವಿ ಸಿಂಧು ಕೊನೆಗೂ ತವರಿಗೆ ವಾಪಾಸಾಗಿದ್ದಾರೆ. ಅವರು ಮಂಗಳವಾರ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಬಂದಿಳಿದಿದ್ದಾರೆ. ಸ್ವತಃ ಸಿಂಧು ತಮ್ಮ ಎಕ್ಸ್​ ಖಾತೆ ಮೂಲಕ ಇದನ್ನು ಬಹಿರಂಗಪಡಿಸಿದ್ದಾರೆ.

"ನಾನು ಸುರಕ್ಷಿತವಾಗಿ ಬೆಂಗಳೂರನ್ನು ತಲುಪಿದ್ದೇನೆ. ಕಳೆದ ಕೆಲವು ದಿನಗಳಿಂದ ಬಹಳ ಅನಿಶ್ಚಿತ ಪರಿಸ್ಥಿತಿಗಳನ್ನು ಎದುರಿಸುತ್ತಿದ್ದರೂ, ನಾನು ಅಂತಿಮವಾಗಿ ಮನೆಗೆ ತಲುಪಲು ಸಾಧ್ಯವಾಯಿತು. ಈ ಕಷ್ಟದ ಸಮಯದಲ್ಲಿ ನಮ್ಮನ್ನು ಸುರಕ್ಷಿತವಾಗಿರಿಸಿದ್ದಕ್ಕಾಗಿ ದುಬೈ ಅಧಿಕಾರಿಗಳು, ವಿಮಾನ ನಿಲ್ದಾಣದ ಸಿಬ್ಬಂದಿ ಮತ್ತು ಇಮಿಗ್ರೇಷನ್​ ಅಧಿಕಾರಿಗಳು ಒದಗಿಸಿದ ಸೇವೆಗಳನ್ನು ನಾನು ಪದಗಳಲ್ಲಿ ಹೇಳಲು ಸಾಧ್ಯವಿಲ್ಲ. ಅವರೆಲ್ಲರಿಗೂ ನಾನು ನನ್ನ ಹೃತ್ಪೂರ್ವಕ ಕೃತಜ್ಞತೆಯನ್ನು ವ್ಯಕ್ತಪಡಿಸುತ್ತೇನೆ. ನಾನು ಈಗ ವಿಶ್ರಾಂತಿ ಪಡೆಯಲು ಬಯಸುತ್ತೇನೆ. ರಿಸೆಟ್​ ಆದ ನಂತರ ನನ್ನ ಮುಂದಿನ ಯೋಜನೆಗಳ ಬಗ್ಗೆ ಯೋಚಿಸುತ್ತೇನೆ,'' ಎಂದು ಸಿಂಧು ತಮ್ಮ ಪೋಸ್ಟ್‌ನಲ್ಲಿ ಬರೆದಿದ್ದಾರೆ.

ಆಲ್ ಇಂಗ್ಲೆಂಡ್ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌ಗಾಗಿ ಕಳೆದ ವಾರ ಇಂಗ್ಲೆಂಡ್‌ಗೆ ತೆರಳಿದ್ದ ಸಿಂಧು, ಯುಎಸ್-ಇಸ್ರೇಲ್ ಮತ್ತು ಇರಾನ್ ಘರ್ಷಣೆಯಿಂದಾಗಿ ದುಬೈ ವಿಮಾನ ನಿಲ್ದಾಣದಲ್ಲಿ ಸಿಲುಕಿಕೊಂಡಿದ್ದರು. ಉದ್ವಿಗ್ನತೆಯ ನಡುವೆ ಕಳೆದ ಶನಿವಾರ ವಿಮಾನ ಸೇವೆಗಳನ್ನು ಹಠಾಟ್ ರದ್ದುಗೊಳಿಸಿದ ನಂತರ ಅವರ ಪ್ರಯಾಣವನ್ನು ಸ್ಥಗಿತಗೊಳಿಸಲಾಯಿತು. ಅಂದಿನಿಂದ ಅವರು ದುಬೈನಲ್ಲಿ ಸಿಲುಕಿಕೊಂಡಿದ್ದರು. ಈ ಸಂದರ್ಭದಲ್ಲಿ, ಯುಎಇ ಮತ್ತು ಭಾರತೀಯ ಅಧಿಕಾರಿಗಳ ಸಮನ್ವಯದೊಂದಿಗೆ ಅಲ್ಲಿ ಸಿಲುಕಿರುವ ಭಾರತೀಯರನ್ನು ಮರಳಿ ಕರೆತರಲು ವ್ಯವಸ್ಥೆ ಮಾಡಲಾಯಿತು. ಇದರಿಂದಾಗಿ ಸಿಂಧು ಬೆಂಗಳೂರಿಗೆ ಬಂದಿಳಿದ್ದಾರೆ.

ಏತನ್ಮಧ್ಯೆ, ಆಲ್ ಇಂಗ್ಲೆಂಡ್ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್ ಮಂಗಳವಾರ ಆರಂಭವಾಗಲಿದೆ. ಈ ಪಂದ್ಯಾವಳಿಯಲ್ಲಿ ಸಿಂಧು ಭಾಗವಹಿಸುವ ಬಗ್ಗೆ ಅನಿಶ್ಚಿತತೆ ಇದೆ. ಪ್ರಸ್ತುತ ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಗಮನಿಸುತ್ತಿರುವ ಬ್ಯಾಡ್ಮಿಂಟನ್ ವಿಶ್ವ ಒಕ್ಕೂಟ (WFI), ಪ್ರಯಾಣದ ಅಡಚಣೆಗಳಿಂದಾಗಿ ಆಟಗಾರರು ತಡವಾಗಿ ಬಂದರೆ ವೇಳಾಪಟ್ಟಿಯಲ್ಲಿ ಬದಲಾವಣೆಗಳನ್ನು ಮಾಡಲು ಸಿದ್ಧರಿರುವಂತೆ ತೋರುತ್ತಿದೆ. ಆದಾಗ್ಯೂ, ಈ ಬಗ್ಗೆ ಯಾವುದೇ ಅಧಿಕೃತ ಘೋಷಣೆ ಮಾಡಲಾಗಿಲ್ಲ.

ವಿಶ್ವ ಶ್ರೇಯಾಂಕದಲ್ಲಿ 12 ನೇ ಸ್ಥಾನದಲ್ಲಿರುವ ಟೆನ್ನಿಸ್​ ತಾರೆ ಪಿವಿ ಸಿಂಧು, ಆಲ್ ಇಂಗ್ಲೆಂಡ್ ಚಾಂಪಿಯನ್‌ಶಿಪ್‌ನ ಮೊದಲ ಸುತ್ತಿನಲ್ಲಿ ಥೈಲ್ಯಾಂಡ್‌ನ ಸುಪಾನಿಡಾ ಕಟೆಥಾಂಗ್ ಅವರನ್ನು ಎದುರಿಸಬೇಕಿತ್ತು. ಲಕ್ಷ್ಯ ಸೇನ್ ಮತ್ತು ಆಯುಷ್ ಶೆಟ್ಟಿ ತಮ್ಮ ಮೊದಲ ಸುತ್ತಿನ ಪಂದ್ಯಗಳನ್ನು ಗೆದ್ದುಕೊಂಡಿದ್ದಾರೆ.

ಇದನ್ನೂ ಓದಿ: ಪಾಕಿಸ್ತಾನ ತಂಡದ ಆಟಗಾರರಿಗೆ ತಲಾ ₹50 ಲಕ್ಷ ದಂಡ ವಿಧಿಸಿದ ಪಿಸಿಬಿ!!