ಸತತ ಎರಡನೇ ಬಾರಿಗೆ ಐಪಿಎಲ್ ಟ್ರೋಫಿ ಗೆದ್ದ ಆರ್ಸಿಬಿ: ಅಭಿನಂದನೆ ಸಲ್ಲಿಸಿದ ಡಿ.ಕೆ ಶಿವಕುಮಾರ್, ಸಿದ್ದರಾಮಯ್ಯ
ಸತತ ಎರಡನೇ ಬಾರಿ ಇಂಡಿಯನ್ ಪ್ರೀಮಿಯರ್ ಲೀಗ್ ಪ್ರಶಸ್ತಿ ಗೆದ್ದಿರುವ ಆರ್ಸಿಬಿ ತಂಡಕ್ಕೆ ಡಿ. ಕೆ. ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಅಭಿನಂದನೆ ಸಲ್ಲಿಸಿದ್ದಾರೆ.

Published : June 1, 2026 at 7:15 AM IST
ಬೆಂಗಳೂರು : ಭಾನುವಾರ ರಾತ್ರಿ ನಡೆದ ಫೈನಲ್ ಪಂದ್ಯದಲ್ಲಿ ಗುಜರಾತ್ ತಂಡವನ್ನು ಮಣಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸತತ ಎರಡನೇ ಬಾರಿಗೆ IPL ಪ್ರಶಸ್ತಿ ಗೆದ್ದಿದ್ದು, ನಿಯೋಜಿತ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಮತ್ತು ನಿರ್ಗಮಿತ ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿನಂದನೆ ಸಲ್ಲಿಸಿದ್ದಾರೆ.
ಫೈನಲ್ ಪಂದ್ಯದ ಸ್ಥಳವನ್ನು ಗುಜರಾತ್ಗೆ ಸ್ಥಳಾಂತರಿಸಿದ್ದಕ್ಕಾಗಿ ಐಪಿಎಲ್ ಸಂಘಟಕರ ವಿರುದ್ಧವೂ ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ. ಇದು ಕರ್ನಾಟಕಕ್ಕೆ ಅನ್ಯಾಯವಾಗಿದೆ. ಈ ಕ್ರಮವು ರಾಜಕೀಯ ಪ್ರೇರಿತವಾಗಿದೆ ಎಂದು ಆರೋಪಿಸಿದ್ದಾರೆ.
Tonight, Bengaluru rises again as champions!
— DK Shivakumar (@DKShivakumar) May 31, 2026
ಈ ಸಲವೂ ಕಪ್ ನಮ್ದೇ ⭐️⭐️
RCB has created history by clinching a second consecutive IPL title. With grit, composure, and the heart of true champions, the team has once again made Bengaluru proud.
Congratulations to the players,… pic.twitter.com/y2hgXT4m2l
ಐಪಿಎಲ್ ಫೈನಲ್ ಪಂದ್ಯ ಬೆಂಗಳೂರಿನಲ್ಲಿ ನಡೆಯಬೇಕಿತ್ತು. ನಮಗೆ ಅನ್ಯಾಯವಾಗಿದೆ. ರಾಜಕೀಯದ ಕಾರಣ ಅವರು ಅದನ್ನು ಬೇರೆ ಸ್ಥಳದಲ್ಲಿ ನಡೆಸಿದರು. ನಾನು ಅದರ ಬಗ್ಗೆ ಹೆಚ್ಚು ಮಾತನಾಡುವುದಿಲ್ಲ ಎಂದು ಅವರು ಮಾಧ್ಯಮದವರಿಗೆ ತಿಳಿಸಿದ್ದಾರೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು ಕಳೆದ ವರ್ಷದ ಗೆಲುವಿನ ಹಾದಿಯನ್ನು ಮುಂದುವರೆಸಿದೆ ಮತ್ತು ಪಂದ್ಯಾವಳಿಯಲ್ಲಿ ಅಸಾಧಾರಣ ಪ್ರದರ್ಶನ ನೀಡಿದೆ ಎಂದು ಅವರು ಶ್ಲಾಘಿಸಿದ್ದಾರೆ. ಕರ್ನಾಟಕದ ಆರ್ಸಿಬಿ ಅಭಿಮಾನಿಗಳ ಪರವಾಗಿ ಮತ್ತು ರಾಜ್ಯ ಸರ್ಕಾರದ ಪರವಾಗಿ ನಾನು ಅವರನ್ನು ಅಭಿನಂದಿಸುತ್ತೇನೆ ಎಂದು ಅವರು ಹೇಳಿದ್ದಾರೆ.
ನಿಯೋಜಿತ ಮುಖ್ಯಮಂತ್ರಿ ಮತ್ತು ನಿರ್ಗಮಿತ ಮುಖ್ಯಮಂತ್ರಿ 'X' ನಲ್ಲಿ ಪ್ರತ್ಯೇಕ ಪೋಸ್ಟ್ ಮಾಡಿದ್ದು, ಆರ್ಸಿಬಿ ಸಾಧನೆಯನ್ನು ಕೊಂಡಾಡಿದ್ದಾರೆ.
ಆರ್ಸಿಬಿ ಸತತ ಎರಡನೇ ಐಪಿಎಲ್ ಪ್ರಶಸ್ತಿಯನ್ನು ಗೆಲ್ಲುವ ಮೂಲಕ ಇತಿಹಾಸ ಸೃಷ್ಟಿಸಿದೆ. ಧೈರ್ಯ, ಸಂಯಮ ಮತ್ತು ನಿಜವಾದ ಚಾಂಪಿಯನ್ಗಳ ಹೃದಯದಿಂದ ತಂಡವು ಮತ್ತೊಮ್ಮೆ ಬೆಂಗಳೂರಿಗೆ ಹೆಮ್ಮೆ ತಂದಿದೆ ಎಂದು ಶಿವಕುಮಾರ್ ಹೇಳಿದ್ದಾರೆ.
ಇಂದು ರಾತ್ರಿ, ಬೆಂಗಳೂರು ಮತ್ತೆ ಚಾಂಪಿಯನ್ ಆಗಿ ಮೇಲೇರುತ್ತದೆ! ಹಾಗೂ ಈ ವರ್ಷವೂ ಕಪ್ ನಮಗೇ ಸೇರಿದೆ ಎಂದು ಘೋಷಿಸುತ್ತಾ ಅವರು ತಂಡವು ಫ್ರಾಂಚೈಸಿಯ ಇತಿಹಾಸದಲ್ಲಿ ಸುವರ್ಣ ಅಧ್ಯಾಯವನ್ನು ಬರೆದಿದೆ ಎಂದಿದ್ದಾರೆ. ತಂಡದ ಪ್ರತಿ ಹೆಜ್ಜೆಯಲ್ಲೂ ಬೆಂಬಲವಾಗಿ ನಿಂತ ಆಟಗಾರರು, ತರಬೇತುದಾರರು, ಸಹಾಯಕ ಸಿಬ್ಬಂದಿ ಮತ್ತು ಲಕ್ಷಾಂತರ ಅಭಿಮಾನಿಗಳಿಗೆ ಅಭಿನಂದನೆಗಳು' ಎಂದು ಶಿವಕುಮಾರ್ ಎಕ್ಸ್ನಲ್ಲಿ ಬರೆದುಕೊಂಡಿದ್ದಾರೆ.
ಆರ್ಸಿಬಿ ಮತ್ತೊಮ್ಮೆ ಐಪಿಎಲ್ ಚಾಂಪಿಯನ್ ಆಗಿ ಹೊರಹೊಮ್ಮಿದೆ ಮತ್ತು ಪಂದ್ಯಾವಳಿಯುದ್ದಕ್ಕೂ ತಂಡವು ಆಕ್ರಮಣಕಾರಿ ಪ್ರದರ್ಶನ ನೀಡಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
.@RCBTweets has once again emerged as the IPL champions. Throughout the tournament, the fearless brand of cricket displayed by the RCB boys seemed to leave opposing teams with no answers.
— Siddaramaiah (@siddaramaiah) May 31, 2026
Congratulations to our RCB on lifting the trophy for the second consecutive time. This… pic.twitter.com/1AeTz55DIN
ಸತತ ಎರಡನೇ ಋತುವಿನಲ್ಲಿ ಟ್ರೋಫಿ ಎತ್ತಿ ಹಿಡಿದ ತಂಡವನ್ನು ಅಭಿನಂದಿಸಿದ ಸಿದ್ದರಾಮಯ್ಯ, ತಂಡದ ಒಗ್ಗಟ್ಟಿನ ಪ್ರದರ್ಶನದಿಂದ ಈ ಗೆಲುವು ಸಿಕ್ಕಿದೆ. ಎಲ್ಲೆಡೆ ಆರ್ಸಿಬಿ ಅಭಿಮಾನಿಗಳ ಮನೆಗಳಲ್ಲಿ ಹಬ್ಬದ ವಾತಾವರಣ ಸೃಷ್ಟಿಸಿದೆ ಎಂದಿದ್ದಾರೆ.
ಆರ್ಸಿಬಿ ವಿಜಯೋತ್ಸವದ ಆಚರಣೆಗೆ ಸಂಬಂಧಿಸಿದಂತೆ ರಾಜ್ಯ ಪೊಲೀಸ್ ಇಲಾಖೆ ಕೆಲವು ಮಾರ್ಗಸೂಚಿಗಳನ್ನು ಹೊರಡಿಸಿದೆ. ಇವು ನಿಮ್ಮ ಸುರಕ್ಷತೆ ಮತ್ತು ಯೋಗಕ್ಷೇಮಕ್ಕಾಗಿ, ಆದ್ದರಿಂದ ದಯವಿಟ್ಟು ಅವುಗಳನ್ನು ಪಾಲಿಸಿ ಎಂದು ಅವರು ಹೇಳಿದ್ದಾರೆ.
ಇದನ್ನೂ ಓದಿ : ಸತತ ಎರಡನೇ ಟ್ರೋಫಿ ಗೆದ್ದ ಆರ್ಸಿಬಿ ಮೇಲೆ ಹಣದ ಸುರಿಮಳೆ! ವೈಭವ್ ಸೂರ್ಯವಂಶಿಗೂ ಸಿಕ್ಕಿತು ಭಾರಿ ಮೊತ್ತ

