ETV Bharat / state

ಸ್ವಕ್ಷೇತ್ರ ಸೊರಬದ 32 ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ವಿಮಾನಯಾನ ಮಾಡಿಸಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ

10ನೇ ತರಗತಿಯಲ್ಲಿ ಶೇ.97ಕ್ಕಿಂತ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಸಚಿವ ಮಧು ಬಂಗಾರಪ್ಪ ವಿಮಾನ ಪ್ರಯಾಣ ಮಾಡಿಸಿದ್ದಾರೆ.

MINISTER S MADHU BANGARAPPA ARRANGES FLIGHT FOR STUDENTS FROM HIS OWN CONSTITUENCY ON HIS BIRTHDAY
ತಮ್ಮ ಜನ್ಮದಿನದ ಹಿನ್ನೆಲೆಯಲ್ಲಿ ಸ್ವಕ್ಷೇತ್ರದ ವಿದ್ಯಾರ್ಥಿಗಳಿಗೆ ವಿಮಾನಯಾನ ಮಾಡಿಸಿದ ಶಿಕ್ಷಣ ಸಚಿವ ಎಸ್.ಮಧು ಬಂಗಾರಪ್ಪ (ETV Bharat)
author img

By ETV Bharat Karnataka Team

Published : March 3, 2026 at 8:26 AM IST

1 Min Read
Choose ETV Bharat

ಶಿವಮೊಗ್ಗ: 10ನೇ ತರಗತಿಯಲ್ಲಿ ಶೇ.97ಕ್ಕಿಂತ ಹೆಚ್ಚು ಅಂಕ ಗಳಿಸಿದ ಸ್ವಕ್ಷೇತ್ರ ಸೊರಬ ವಿದ್ಯಾರ್ಥಿಗಳಿಗೆ ವಿಮಾನ ಪ್ರಯಾಣ ಮಾಡಿಸಿದ್ದಾರೆ.

ಸೋಮವಾರ ತಮ್ಮ ಹುಟ್ಟುಹಬ್ಬದ ಅಂಗವಾಗಿ ಶಿವಮೊಗ್ಗ ವಿಮಾನ ನಿಲ್ದಾಣದಿಂದ ಬೆಂಗಳೂರು ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ವಿಮಾನದಲ್ಲಿ ತಮ್ಮ ಜೊತೆ ವಿದ್ಯಾರ್ಥಿಗಳನ್ನು ಅವರು ಕರೆದುಕೊಂಡು ಹೋಗಿದ್ದಾರೆ.

ತಮ್ಮ ಜನ್ಮದಿನದ ಹಿನ್ನೆಲೆಯಲ್ಲಿ ಸ್ವಕ್ಷೇತ್ರದ ವಿದ್ಯಾರ್ಥಿಗಳಿಗೆ ವಿಮಾನಯಾನ ಮಾಡಿಸಿದ ಶಿಕ್ಷಣ ಸಚಿವ ಎಸ್.ಮಧು ಬಂಗಾರಪ್ಪ (ETV Bharat)

32 ವಿದ್ಯಾರ್ಥಿಗಳು ಶಿವಮೊಗ್ಗದಿಂದ ಇಂಡಿಗೋ ವಿಮಾನದಲ್ಲಿ ತಮ್ಮ ಕ್ಷೇತ್ರದ ಶಾಸಕರ ಜೊತೆ ವಿಮಾನದಲ್ಲಿ ಪ್ರಯಾಣ ಬೆಳೆಸಿದರು. ಪ್ರತಿಯೊಬ್ಬ ವಿದ್ಯಾರ್ಥಿ ಜೊತೆ ಅವರ ಓರ್ವ ಪೋಷಕರೂ ಸಹ ಪ್ರಯಾಣಿಸಿದರು. ಸಚಿವ ಮಧು ಬಂಗಾರಪ್ಪ ಅವರು ವಿಮಾನದಲ್ಲಿ ಪ್ರತಿ ವಿದ್ಯಾರ್ಥಿಗೂ ಕಿಟಕಿ ಪಕ್ಕ ಸೀಟು ದೊರಕುವಂತೆ ಮಾಡಿ, ಪ್ರತಿಯೊಬ್ಬರನ್ನು ಮಾತನಾಡಿಸುತ್ತಾ, ಅವರ ಅಂಕಗಳನ್ನು ಕೇಳುತ್ತಾ ಗುಡ್ ಎನ್ನುತ್ತಾ ಹುರಿದುಂಬಿಸಿದರು.

30ಕ್ಕೂ ಹೆಚ್ಚು ಪೌರ ಕಾರ್ಮಿಕರಿಗೆ ವಿಮಾನಯಾನ: ತಮ್ಮ ಜನ್ಮದಿನದ ಹಿನ್ನೆಲೆಯಲ್ಲಿ ಮಧು ಬಂಗಾರಪ್ಪ ಭಾನುವಾರ ಸೊರಬ ತಾಲೂಕಿನ 40 ಜನ ಪೌರ ಕಾರ್ಮಿಕರಿಗೂ ವಿಮಾನಯಾನ ಭಾಗ್ಯ ಕಲ್ಪಿಸಿದ್ದರು. ಸೊರಬ ಹಾಗೂ ಆನವಟ್ಟಿಯ ಪೌರ ಕಾರ್ಮಿಕರಿಗೆ ಶಿವಮೊಗ್ಗದಿಂದ ಬೆಂಗಳೂರಿಗೆ ವಿಮಾನಯಾನ ಮಾಡಿಸಿದ್ದರು. ಪೌರ ಕಾರ್ಮಿಕರು ಶಿವಮೊಗ್ಗದ ಕುವೆಂಪು ವಿಮಾನ ನಿಲ್ದಾಣದಿಂದ ಇಂಡಿಗೋ ವಿಮಾನದ ಮೂಲಕ ಬೆಂಗಳೂರಿಗೆ ಪ್ರಯಾಣಿಸಿದ್ದರು.

ಕಳೆದ ವರ್ಷ ತಮ್ಮ ಜನ್ಮ ದಿನಾಚರಣೆಯ ಅಂಗವಾಗಿ ಮಾಜಿ ಸಿಎಂ ದಿ.ಎಸ್.ಬಂಗಾರಪ್ಪ ಅವರ ಒಡನಾಡಿಗಳಿಗೆ ವಿಮಾನಯಾನ ಮಾಡಿಸಿದ್ದರು.

ಇದನ್ನೂ ಓದಿ: ಸಚಿವ ಮಧು ಬಂಗಾರಪ್ಪ ಬರ್ತಡೇ: 30ಕ್ಕೂ ಹೆಚ್ಚು ಪೌರ ಕಾರ್ಮಿಕರಿಗೆ ವಿಮಾನಯಾನ ಭಾಗ್ಯ