ETV Bharat / state

ಗೃಹಜ್ಯೋತಿ ಯೋಜನೆ ಪರಿಷ್ಕರಣೆ; ಬಾಡಿಗೆದಾರರು ಆತಂಕಪಡಬೇಕಿಲ್ಲ: ಬೆಸ್ಕಾಂ ಸ್ಪಷ್ಟನೆ

ಗೃಹಜ್ಯೋತಿ ಯೋಜನೆ ಪರಿಷ್ಕರಣೆ ಬಗ್ಗೆ ಹೆಚ್ಚಿನ ಮಾಹಿತಿ ಅಥವಾ ಗೊಂದಲಗಳಿದ್ದಲ್ಲಿ ಗ್ರಾಹಕರು ತಮ್ಮ ಹತ್ತಿರದ ಬೆಸ್ಕಾಂ ಉಪ ವಿಭಾಗದ ಕಚೇರಿಯನ್ನು ಸಂಪರ್ಕಿಸುವಂತೆ ತಿಳಿಸಲಾಗಿದೆ.

tenants-need-not-worry-about-revision-of-grihajyothi-scheme-bescom-clarifies
ಸಂಗ್ರಹ ಚಿತ್ರ (ETV Bharat)
author img

By ETV Bharat Karnataka Team

Published : July 5, 2026 at 8:55 PM IST

1 Min Read
Choose ETV Bharat

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ 'ಗೃಹಜ್ಯೋತಿ' ಯೋಜನೆಯಡಿ ಉಚಿತ ವಿದ್ಯುತ್ ಪಡೆಯುತ್ತಿರುವ ಫಲಾನುಭವಿಗಳ ಮಾಹಿತಿ ಪರಿಶೀಲನೆ ಕಾರ್ಯ ಜುಲೈ 1, 2026ರಿಂದ ಆರಂಭಗೊಂಡಿದ್ದು, ಬಾಡಿಗೆದಾರರು ಆಧಾರ್ ಮಾಹಿತಿ ಅಪ್​ಡೇಟ್ ಕುರಿತು ಗೊಂದಲಪಡಬೇಕಾಗಿಲ್ಲ ಎಂದು ಬೆಸ್ಕಾಂ ಸ್ಪಷ್ಟಪಡಿಸಿದೆ.

ಬೆಸ್ಕಾಂ ಮೀಟರ್ ರೀಡರ್ ಹಾಗೂ ಸಿಬ್ಬಂದಿ ಫಲಾನುಭವಿಗಳ ಮನೆ ಮನೆ ಸಮೀಕ್ಷೆ ಕಾರ್ಯ ನಡೆಸುವ ವೇಳೆ ಹಳೆ ಬಾಡಿಗೆದರರ ಆಧಾರ್ ವಿವರ ತೆಗೆದುಹಾಕಿ, ಈಗಿರುವ ಬಾಡಿಗೆದಾರರ ಆಧಾರ್ ವಿವರಗಳನ್ನು ಅಪ್​ಡೇಟ್ ಮಾಡಿಕೊಳ್ಳಲಿದ್ದಾರೆ. ಹಾಗಾಗಿ ಯೋಜನೆ ಸ್ಥಗಿತಗೊಳ್ಳಲಿದೆ ಎಂಬ ಆತಂಕ ಬೇಡ ಎಂದು ಬೆಸ್ಕಾಂ ತಿಳಿಸಿದೆ.

ಯೋಜನೆಯ ಸೌಲಭ್ಯ ನಿಲ್ಲುವುದಿಲ್ಲ: ಈ ಹಿಂದೆ ಇದ್ದ ಬಾಡಿಗೆದಾರರ ಆಧಾರ್ ಮಾಹಿತಿಯಿಂದಾಗಿ ತಮಗೆ ಯೋಜನೆ ಸ್ಥಗಿತಗೊಳ್ಳಲಿದೆಯೇ ಎಂಬ ಆತಂಕ ಈಗಿರುವ ಬಾಡಿಗೆದಾರರಿಗೆ ಬಂದಿರುವ ಹಿನ್ನೆಲೆಯಲ್ಲಿ ಬೆಸ್ಕಾಂ ಈ ಸ್ಪಷ್ಟನೆ ನೀಡಿದೆ. ಸಮೀಕ್ಷೆ ವೇಳೆ ಹಳೆಯ ಬಾಡಿಗೆದಾರರ ಆಧಾರ್ ಕಾರ್ಡ್ ಮತ್ತು ವಿವರಗಳನ್ನು ತೆಗೆದುಹಾಕಿ, ಹೊಸ ಬಾಡಿಗೆದಾರರ ಆಧಾರ್ ಸಂಖ್ಯೆ ನಮೂದು ಮಾಡಿಕೊಳ್ಳಲಾಗುವುದು. ಹೀಗಾಗಿ ಗೃಹಜ್ಯೋತಿ ಯೋಜನೆಯ ಸೌಲಭ್ಯ ನಿಲ್ಲುವುದಿಲ್ಲ ಎಂದು ಬೆಸ್ಕಾಂ ಹೇಳಿದೆ.

ಮನೆ ಮಾಲೀಕರು ಬಾಡಿಗೆದಾರರಿಗೆ ಮಾರ್ಗದರ್ಶನ ನೀಡಿ: ಬಾಡಿಗೆದಾರರು ತಮ್ಮ ವಿವರಗಳನ್ನು ಬದಲಾಯಿಸಲು ಯಾವುದೇ ಕಚೇರಿಗೆ ಹೋಗಬೇಕಾದ ಅಗತ್ಯವಿಲ್ಲ. ಬೆಸ್ಕಾಂ ಸಿಬ್ಬಂದಿ ನಿಮ್ಮ ಮನೆ ಬಾಗಿಲಿಗೆ ಬಂದು ಸಮೀಕ್ಷೆಯ ಸಮಯದಲ್ಲಿ ನಿಮ್ಮ ಆಧಾರ್ ಮತ್ತು ಬಾಡಿಗೆ/ಲೀಸ್ ಕರಾರು ವಿವರಗಳನ್ನು ಅಪ್‌ಡೇಟ್ ಮಾಡಲಿದ್ದಾರೆ. ಈ ಪ್ರಕ್ರಿಯೆ ಕೇವಲ ಫಲಾನುಭವಿಗಳ ದಾಖಲೆಗಳನ್ನು ಪರಿಶೀಲನೆ ಮಾಡುತ್ತಿರುವ ಸಾಮಾನ್ಯ ಪ್ರಕ್ರಿಯೆಯಾಗಿದೆ. ಆದ್ದರಿಂದ ಬಾಡಿಗೆದಾರರು ಯಾವುದೇ ಆತಂಕವಿಲ್ಲದೆ ಬೆಸ್ಕಾಂ ತಂಡಕ್ಕೆ ಅಗತ್ಯ ದಾಖಲೆಗಳನ್ನು ನೀಡಿ ಸಹಕರಿಸಬೇಕಾಗಿ ವಿನಂತಿ. ಜೊತೆಗೆ ಮನೆ ಮಾಲೀಕರು ಕೂಡ ತಮ್ಮ ಬಾಡಿಗೆದಾರರಿಗೆ ಈ ಪ್ರಕ್ರಿಯೆಯಲ್ಲಿ ಸೂಕ್ತ ಮಾರ್ಗದರ್ಶನ ನೀಡಿ ಬೆಂಬಲಿಸಬೇಕಾಗಿ ಕೋರಲಾಗಿದೆ.

ಹೆಚ್ಚಿನ ಮಾಹಿತಿ ಅಥವಾ ಗೊಂದಲಗಳಿದ್ದಲ್ಲಿ ಗ್ರಾಹಕರು ತಮ್ಮ ಹತ್ತಿರದ ಬೆಸ್ಕಾಂ ಉಪ ವಿಭಾಗದ ಕಚೇರಿಯನ್ನು ಸಂಪರ್ಕಿಸಬಹುದು ಅಥವಾ ಕೆಳಗಿನ ಸಹಾಯವಾಣಿ ಸಂಖ್ಯೆಗಳಿಗೆ ಕರೆ ಮಾಡಬಹುದು, ಇಲ್ಲವೇ ಸಂದೇಶ ಕಳುಹಿಸಬಹುದು.

ಬೆಸ್ಕಾಂ ಸಹಾಯವಾಣಿ ಸಂಖ್ಯೆ: 1912;

ವಿಶೇಷ ವಾಟ್ಸ್​ಆ್ಯಪ್ (WhatsApp) ಸಂಖ್ಯೆಗಳು: 9480816111, 9480816112, 9480816113, 9480816114. (ಸಹಾಯವಾಣಿಯು ಪ್ರತಿದಿನ ಬೆಳಗ್ಗೆ 6:00 ಗಂಟೆಯಿಂದ ರಾತ್ರಿ 10:00 ಗಂಟೆಯವರೆಗೆ ಲಭ್ಯವಿರುತ್ತದೆ).

ಇದನ್ನೂ ಓದಿ: ಗೃಹ ಜ್ಯೋತಿ ಪರಿಶೀಲನೆ ವೇಳೆ ಫಲಾನುಭವಿಗಳ ಪ್ರವರ್ಗ ಮಾಹಿತಿ ಕಡ್ಡಾಯವಲ್ಲ: ಬೆಸ್ಕಾಂ ಸ್ಪಷ್ಟನೆ