ಡಿವೈನ್​​​ ಸ್ಟಾರ್​​​ ರಿಷಬ್​ ಶೆಟ್ಟಿ ಕುಟುಂಬ ಸಮೇತ ಧಾರ್ಮಿಕ ಕ್ಷೇತ್ರಗಳಿಗೆ ಭೇಟಿ - WATCH VIDEO - ACTOR RISHAB SHETTY

🎬 Watch Now: Feature Video

thumbnail
ಡಿವೈನ್​​​ ಸ್ಟಾರ್​​​ ರಿಷಬ್​ ಶೆಟ್ಟಿ ಕುಟುಂಬ ಸಮೇತ ಧಾರ್ಮಿಕ ಕ್ಷೇತ್ರಗಳಿಗೆ ಭೇಟಿ ವಿಡಿಯೋ (ETV Bharat)

By ETV Bharat Karnataka Team

Published : February 28, 2026 at 4:00 PM IST

1 Min Read
Choose ETV Bharat

ಮಂಗಳೂರು: ಕಾಂತಾರ ಚಿತ್ರದ ಮೂಲಕ ದೇಶವ್ಯಾಪಿ ಖ್ಯಾತಿ ಪಡೆದ ಡಿವೈನ್​​​ ಸ್ಟಾರ್​​​ ರಿಷಬ್​ ಶೆಟ್ಟಿ ಕುಟುಂಬ ಸಮೇತ ಮಂಗಳೂರಿನ ವಿವಿಧ ಧಾರ್ಮಿಕ ಕ್ಷೇತ್ರಗಳಿಗೆ ಶುಕ್ರವಾರ ಭೇಟಿ ನೀಡಿ ದೇವರ ದರ್ಶನ ಪಡೆದರು.

ನಗರದ ಪ್ರಸಿದ್ಧ ಕ್ಷೇತ್ರ ಕಟೀಲು ದುರ್ಗಾ ಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿದ ರಿಷಬ್​​​ ಶೆಟ್ಟಿ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಕದ್ರಿ ಮಂಜುನಾಥ ದೇವಸ್ಥಾನದಲ್ಲೂ ದೇವರ ದರ್ಶನ ಮಾಡಿ ಕುಟುಂಬದೊಂದಿಗೆ ಪ್ರಾರ್ಥನೆ ಸಲ್ಲಿಸಿದರು. ದೇವಸ್ಥಾನದಲ್ಲಿ ಪೂಜೆ ವೇಳೆ ಭಕ್ತರು ಮತ್ತು ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದರು.

ಈ ಸಂದರ್ಭದಲ್ಲಿ ರಿಷಬ್​ ಶೆಟ್ಟಿಯವರ ಪತ್ನಿ ಪ್ರಗತಿ ಶೆಟ್ಟಿ, ಪುತ್ರ ಹಾಗೂ ಕುಟುಂಬ ಸದಸ್ಯರು ಜೊತೆಯಾಗಿದ್ದರು. ದೇವರ ದರ್ಶನದ ನಂತರ ದೇವಾಲಯದ ಆವರಣದಲ್ಲಿ ಅಭಿಮಾನಿಗಳು ರಿಷಬ್​ ಶೆಟ್ಟಿಯವರೊಂದಿಗೆ ಫೋಟೋ ಹಾಗೂ ಸೆಲ್ಪಿ ತೆಗೆಸಿಕೊಳ್ಳಲು ಮುಂದಾದರು. ಅಭಿಮಾನಿಗಳ ಮನವಿ ಮೇರೆಗೆ ಅವರು ಸಹ ಸ್ನೇಹಪೂರ್ವಕವಾಗಿ ಪ್ರತಿಕ್ರಿಯಿಸಿದರು.

ಕಾಂತಾರ ಚಿತ್ರದ ಯಶಸ್ಸಿನ ಬಳಿಕ ರಿಷಬ್​ ಶೆಟ್ಟಿಯವರ ಜನಪ್ರಿಯತೆ ಮತ್ತಷ್ಟು ಏರಿಕೆಯಾಗಿದ್ದು, ಅವರು ಭೇಟಿ ನೀಡಿದ ಸ್ಥಳಗಳಲ್ಲಿ ಭಕ್ತರು ಹಾಗೂ ಅಭಿಮಾನಿಗಳ ಸಂಭ್ರಮ ಕಂಡುಬಂತು. ದೇವಸ್ಥಾನ ಆಡಳಿತ ಮಂಡಳಿಯವರು ರಿಷಬ್​ ಶೆಟ್ಟಿಗೆ ಆತ್ಮೀಯ ಸ್ವಾಗತ ಕೋರಿದರು.

ಇದನ್ನೂ ಓದಿ: ಇದು ವಿಧಿ ಬರೆದ ಕಥೆ ಅಲ್ಲ, ನನಗೆ ನಾನೇ ಬರೆದುಕೊಂಡ ಸಾಧಾರಣ ಕಥೆ: ನಟ‌ ನೀನಾಸಂ ಸತೀಶ್

ಮಂಗಳೂರು: ಕಾಂತಾರ ಚಿತ್ರದ ಮೂಲಕ ದೇಶವ್ಯಾಪಿ ಖ್ಯಾತಿ ಪಡೆದ ಡಿವೈನ್​​​ ಸ್ಟಾರ್​​​ ರಿಷಬ್​ ಶೆಟ್ಟಿ ಕುಟುಂಬ ಸಮೇತ ಮಂಗಳೂರಿನ ವಿವಿಧ ಧಾರ್ಮಿಕ ಕ್ಷೇತ್ರಗಳಿಗೆ ಶುಕ್ರವಾರ ಭೇಟಿ ನೀಡಿ ದೇವರ ದರ್ಶನ ಪಡೆದರು.

ನಗರದ ಪ್ರಸಿದ್ಧ ಕ್ಷೇತ್ರ ಕಟೀಲು ದುರ್ಗಾ ಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿದ ರಿಷಬ್​​​ ಶೆಟ್ಟಿ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಕದ್ರಿ ಮಂಜುನಾಥ ದೇವಸ್ಥಾನದಲ್ಲೂ ದೇವರ ದರ್ಶನ ಮಾಡಿ ಕುಟುಂಬದೊಂದಿಗೆ ಪ್ರಾರ್ಥನೆ ಸಲ್ಲಿಸಿದರು. ದೇವಸ್ಥಾನದಲ್ಲಿ ಪೂಜೆ ವೇಳೆ ಭಕ್ತರು ಮತ್ತು ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದರು.

ಈ ಸಂದರ್ಭದಲ್ಲಿ ರಿಷಬ್​ ಶೆಟ್ಟಿಯವರ ಪತ್ನಿ ಪ್ರಗತಿ ಶೆಟ್ಟಿ, ಪುತ್ರ ಹಾಗೂ ಕುಟುಂಬ ಸದಸ್ಯರು ಜೊತೆಯಾಗಿದ್ದರು. ದೇವರ ದರ್ಶನದ ನಂತರ ದೇವಾಲಯದ ಆವರಣದಲ್ಲಿ ಅಭಿಮಾನಿಗಳು ರಿಷಬ್​ ಶೆಟ್ಟಿಯವರೊಂದಿಗೆ ಫೋಟೋ ಹಾಗೂ ಸೆಲ್ಪಿ ತೆಗೆಸಿಕೊಳ್ಳಲು ಮುಂದಾದರು. ಅಭಿಮಾನಿಗಳ ಮನವಿ ಮೇರೆಗೆ ಅವರು ಸಹ ಸ್ನೇಹಪೂರ್ವಕವಾಗಿ ಪ್ರತಿಕ್ರಿಯಿಸಿದರು.

ಕಾಂತಾರ ಚಿತ್ರದ ಯಶಸ್ಸಿನ ಬಳಿಕ ರಿಷಬ್​ ಶೆಟ್ಟಿಯವರ ಜನಪ್ರಿಯತೆ ಮತ್ತಷ್ಟು ಏರಿಕೆಯಾಗಿದ್ದು, ಅವರು ಭೇಟಿ ನೀಡಿದ ಸ್ಥಳಗಳಲ್ಲಿ ಭಕ್ತರು ಹಾಗೂ ಅಭಿಮಾನಿಗಳ ಸಂಭ್ರಮ ಕಂಡುಬಂತು. ದೇವಸ್ಥಾನ ಆಡಳಿತ ಮಂಡಳಿಯವರು ರಿಷಬ್​ ಶೆಟ್ಟಿಗೆ ಆತ್ಮೀಯ ಸ್ವಾಗತ ಕೋರಿದರು.

ಇದನ್ನೂ ಓದಿ: ಇದು ವಿಧಿ ಬರೆದ ಕಥೆ ಅಲ್ಲ, ನನಗೆ ನಾನೇ ಬರೆದುಕೊಂಡ ಸಾಧಾರಣ ಕಥೆ: ನಟ‌ ನೀನಾಸಂ ಸತೀಶ್

ABOUT THE AUTHOR

...view details