ಬೆಳ್ತಂಗಡಿ: ಹೀಲಿಯಂ ಗ್ಯಾಸ್ ಸೋರಿಕೆಯಿಂದ ಅಗ್ನಿ ಅವಘಡ: ಅಂಗಡಿ ಸುಟ್ಟು ಭಸ್ಮ - FIRE CAUSED BY HELIUM GAS LEAK

🎬 Watch Now: Feature Video

thumbnail
ಹೀಲಿಯಂ ಗ್ಯಾಸ್ ಸೋರಿಕೆಯಿಂದ ಬೆಂಕಿ ಅವಘಡ: ಅಂಗಡಿ ಸುಟ್ಟು ಭಸ್ಮ (ETV Bharat)

By ETV Bharat Karnataka Team

Published : February 14, 2026 at 1:37 PM IST

1 Min Read
Choose ETV Bharat

ಬೆಳ್ತಂಗಡಿ: ಗ್ಯಾಸ್​​​​​ ಸೋರಿಕೆಯಿಂದ ಉಂಟಾದ ಬೆಂಕಿಯಿಂದ ಅಂಗಡಿ ಸುಟ್ಟು ಭಸ್ಮವಾದ ಘಟನೆ ಬೆಳ್ತಂಗಡಿಯಲ್ಲಿ ಫೆ. 14ರಂದು ನಡೆದಿದೆ.

ಬೆಳ್ತಂಗಡಿ ನಗರದ ಸಂತೆಕಟ್ಟೆಯಲ್ಲಿರುವ ಹೇರಾಜೆ ಕಾಂಪ್ಲೆಕ್ಸ್​ನಲ್ಲಿ ಮೊದಲ ಮಹಡಿಯ ಮೊಹಮ್ಮದ್ ಸಮೀಲ್ ಎಂಬವರ ಮಾಲೀಕತ್ವದ ಕೆಎಎಫ್ ಕ್ರಿಯೇಟಿವ್ ಆರ್ಟ್ & ಕ್ರಾಫ್ಟ್ ಸ್ಟೋರ್​ನಲ್ಲಿ ಇಬ್ಬರು ಕೆಲಸದವರು ಫೆ.14 ರಂದು ಬೆಳಗ್ಗೆ 7:30 ಕ್ಕೆ ಕಾರ್ಯಕ್ರಮವೊಂದಕ್ಕೆ ಬಲೂನ್​ಗಳಿಗೆ ಗ್ಯಾಸ್ ತುಂಬಿಸುತ್ತಿದ್ದರು. ಬಲೂನ್​ಗೆ ತುಂಬಿಸುತ್ತಿದ್ದ ಹೀಲಿಯಂ ಗ್ಯಾಸ್ ಸೋರಿಕೆಯಾಗಿ ಬೆಂಕಿ ಉಂಟಾಗಿ ಅಂಗಡಿ ಸಂಪೂರ್ಣ ಸುಟ್ಟು ಹೋಗಿದೆ.

ಘಟನೆ ವೇಳೆ ಅಂಗಡಿಯೊಳಗೆ ಇಬ್ಬರು ಕೆಲಸದವರು ಇದ್ದು ತಕ್ಷಣ ಹೊರಗಡೆ ಓಡಿಬಂದಿದ್ದಾರೆ. ಅಗ್ನಿಶಾಮಕ ದಳ ಮತ್ತು ಸ್ಥಳೀಯರು ಸೇರಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದರು. ಬೆಂಕಿ ಅನಾಹುತದಿಂದ ಕಟ್ಟಡ ಸೇರಿದಂತೆ ಅಕ್ಕಪಕ್ಕದ ಅಂಗಡಿಗಳಿಗೂ ಹಾನಿಯಾಗಿದೆ. ಘಟನೆಯನ್ನು ನೋಡಲು ನೂರಾರು ಮಂದಿ ಜಮಾಯಿಸಿದ್ದರಿಂದ ರಸ್ತೆ ಸಂಚಾರಕ್ಕೆ ತೊಂದರೆಯಾಗಿದ್ದು, ತಕ್ಷಣ ಬೆಳ್ತಂಗಡಿ ಪೊಲೀಸರು ಮತ್ತು ಸಂಚಾರಿ ಪೊಲೀಸರು ಆಗಮಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು. 

ಇದೆ ವೇಳೆ, ಬೆಂಕಿ ಘಟನೆಯನ್ನು ನೋಡುತ್ತಿದ್ದ ಶಾಪ್ ಕೆಲಸದಾಕೆ ಮೂರ್ಛೆ ಹೋದ ಘಟನೆಯೂ ಈ ವೇಳೆ ನಡೆಯಿತು ಬಳಿಕ ಸ್ಥಳೀಯರೆಲ್ಲ ಸೇರಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಇದನ್ನೂ ಓದಿ: ಸಾವಿನಿಂದ ರಕ್ಷಿಸಿದ ವ್ಯಕ್ತಿಯ ಕಾಲಿಗೆ ಬಿದ್ದು ಕೃತಜ್ಞತೆ ಸಲ್ಲಿಸಿದ ವ್ಯಕ್ತಿ: Watch in video

ಬೆಳ್ತಂಗಡಿ: ಗ್ಯಾಸ್​​​​​ ಸೋರಿಕೆಯಿಂದ ಉಂಟಾದ ಬೆಂಕಿಯಿಂದ ಅಂಗಡಿ ಸುಟ್ಟು ಭಸ್ಮವಾದ ಘಟನೆ ಬೆಳ್ತಂಗಡಿಯಲ್ಲಿ ಫೆ. 14ರಂದು ನಡೆದಿದೆ.

ಬೆಳ್ತಂಗಡಿ ನಗರದ ಸಂತೆಕಟ್ಟೆಯಲ್ಲಿರುವ ಹೇರಾಜೆ ಕಾಂಪ್ಲೆಕ್ಸ್​ನಲ್ಲಿ ಮೊದಲ ಮಹಡಿಯ ಮೊಹಮ್ಮದ್ ಸಮೀಲ್ ಎಂಬವರ ಮಾಲೀಕತ್ವದ ಕೆಎಎಫ್ ಕ್ರಿಯೇಟಿವ್ ಆರ್ಟ್ & ಕ್ರಾಫ್ಟ್ ಸ್ಟೋರ್​ನಲ್ಲಿ ಇಬ್ಬರು ಕೆಲಸದವರು ಫೆ.14 ರಂದು ಬೆಳಗ್ಗೆ 7:30 ಕ್ಕೆ ಕಾರ್ಯಕ್ರಮವೊಂದಕ್ಕೆ ಬಲೂನ್​ಗಳಿಗೆ ಗ್ಯಾಸ್ ತುಂಬಿಸುತ್ತಿದ್ದರು. ಬಲೂನ್​ಗೆ ತುಂಬಿಸುತ್ತಿದ್ದ ಹೀಲಿಯಂ ಗ್ಯಾಸ್ ಸೋರಿಕೆಯಾಗಿ ಬೆಂಕಿ ಉಂಟಾಗಿ ಅಂಗಡಿ ಸಂಪೂರ್ಣ ಸುಟ್ಟು ಹೋಗಿದೆ.

ಘಟನೆ ವೇಳೆ ಅಂಗಡಿಯೊಳಗೆ ಇಬ್ಬರು ಕೆಲಸದವರು ಇದ್ದು ತಕ್ಷಣ ಹೊರಗಡೆ ಓಡಿಬಂದಿದ್ದಾರೆ. ಅಗ್ನಿಶಾಮಕ ದಳ ಮತ್ತು ಸ್ಥಳೀಯರು ಸೇರಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದರು. ಬೆಂಕಿ ಅನಾಹುತದಿಂದ ಕಟ್ಟಡ ಸೇರಿದಂತೆ ಅಕ್ಕಪಕ್ಕದ ಅಂಗಡಿಗಳಿಗೂ ಹಾನಿಯಾಗಿದೆ. ಘಟನೆಯನ್ನು ನೋಡಲು ನೂರಾರು ಮಂದಿ ಜಮಾಯಿಸಿದ್ದರಿಂದ ರಸ್ತೆ ಸಂಚಾರಕ್ಕೆ ತೊಂದರೆಯಾಗಿದ್ದು, ತಕ್ಷಣ ಬೆಳ್ತಂಗಡಿ ಪೊಲೀಸರು ಮತ್ತು ಸಂಚಾರಿ ಪೊಲೀಸರು ಆಗಮಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು. 

ಇದೆ ವೇಳೆ, ಬೆಂಕಿ ಘಟನೆಯನ್ನು ನೋಡುತ್ತಿದ್ದ ಶಾಪ್ ಕೆಲಸದಾಕೆ ಮೂರ್ಛೆ ಹೋದ ಘಟನೆಯೂ ಈ ವೇಳೆ ನಡೆಯಿತು ಬಳಿಕ ಸ್ಥಳೀಯರೆಲ್ಲ ಸೇರಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಇದನ್ನೂ ಓದಿ: ಸಾವಿನಿಂದ ರಕ್ಷಿಸಿದ ವ್ಯಕ್ತಿಯ ಕಾಲಿಗೆ ಬಿದ್ದು ಕೃತಜ್ಞತೆ ಸಲ್ಲಿಸಿದ ವ್ಯಕ್ತಿ: Watch in video

ABOUT THE AUTHOR

...view details